ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಟ್ಟಿಗೆ ಅಡ್ಡೆಗಳಿಗೆ ಇಂದು ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಭೇಟಿ ನೀಡಿದರು.
ತಹಶೀಲ್ದಾರ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ, ಹೆಸ್ಕಾಂ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಟ್ಟಿಗೆ ಅಡ್ಡೆಗಳ ಮಾಲಿಕರಿಗೆ ದಾಖಲೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಡ್ಡೆ ನಡೆಸಲು ಪರವಾನಿಗೆ, ಎನ್.ಎ, ಕೈಗಾರಿಕೆ, ಅರಣ್ಯ ಇಲಾಖೆ ನೀಡಿದ ದಾಖಲೆಗಳನ್ನು ಮಂಗಳವಾರ ಸಂಜೆಯೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ದಾಖಲೆ ಸಲ್ಲಿಸದಿದ್ದರೆ ಮೊದಲ ಹಂತದಲ್ಲಿ ಕಟ್ಟಿಗೆ ಅಡ್ಡೆಗಳಿಗೆ ನೀಡಿದ ವಿದ್ಯುತ್ ಸಂಪರ್ಕ ಕಟ್ ಮಾಡಲಾಗುವುದು. ಎರಡನೇ ಹಂತದಲ್ಲಿ ಶಾಶ್ವತವಾಗಿ ಅಡ್ಡೆಗಳನ್ನು ಬಂದ್ ಮಾಡಿಸಲಾಗುವುದು. ಒಂದು ವೇಳೆ ಪರಿಸರ ಇಲಾಖೆ ಪರಿಶೀಲಿಸಿ ಎನ್.ಓ.ಸಿ ನೀಡಿದರೆ ನಾವು ಅನುಮತಿ ನೀಡಬೇಕಾಗುತ್ತದೆ ಎಂದು ತಹಸೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಉತ್ತರಪ್ರಭಕ್ಕೆ ತಿಳಿಸಿದರು.
ಈ ಕುರಿತು ಉತ್ತರಪ್ರಭ ಸರಣಿ ವರದಿ ಪ್ರಕಟಿಸಿತ್ತು.

Leave a Reply

Your email address will not be published. Required fields are marked *

You May Also Like

ದಲಿತರ ಮೇಲೆ ಮಾರಣಾಂತಿಕ ಹಲ್ಲೆ : ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ ಅನ್ವಯ ಬಂಧನಕ್ಕೆ ಆಗ್ರಹ

ಉತ್ತರಪ್ರಭ ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ…

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…

ಇಡಿ ಅಧಿಕಾರಿಗಳನ್ನು ಬಿಟ್ಟಿಲ್ಲ ಕೊರೊನಾ!

ನವದೆಹಲಿ: ದೇಶದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಜಾರಿ ನಿರ್ದೇಶನಾಲಯ(ಇಡಿ)ದ ಆರು ಜನ…

ದೇಶದಲ್ಲಿ 59 ಲಕ್ಷದ ಗಡಿ ದಾಟಿದ ಮಹಾಮಾರಿ!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.