ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಟ್ಟಿಗೆ ಅಡ್ಡೆಗಳಿಗೆ ಇಂದು ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಭೇಟಿ ನೀಡಿದರು.
ತಹಶೀಲ್ದಾರ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ, ಹೆಸ್ಕಾಂ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಟ್ಟಿಗೆ ಅಡ್ಡೆಗಳ ಮಾಲಿಕರಿಗೆ ದಾಖಲೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಡ್ಡೆ ನಡೆಸಲು ಪರವಾನಿಗೆ, ಎನ್.ಎ, ಕೈಗಾರಿಕೆ, ಅರಣ್ಯ ಇಲಾಖೆ ನೀಡಿದ ದಾಖಲೆಗಳನ್ನು ಮಂಗಳವಾರ ಸಂಜೆಯೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ದಾಖಲೆ ಸಲ್ಲಿಸದಿದ್ದರೆ ಮೊದಲ ಹಂತದಲ್ಲಿ ಕಟ್ಟಿಗೆ ಅಡ್ಡೆಗಳಿಗೆ ನೀಡಿದ ವಿದ್ಯುತ್ ಸಂಪರ್ಕ ಕಟ್ ಮಾಡಲಾಗುವುದು. ಎರಡನೇ ಹಂತದಲ್ಲಿ ಶಾಶ್ವತವಾಗಿ ಅಡ್ಡೆಗಳನ್ನು ಬಂದ್ ಮಾಡಿಸಲಾಗುವುದು. ಒಂದು ವೇಳೆ ಪರಿಸರ ಇಲಾಖೆ ಪರಿಶೀಲಿಸಿ ಎನ್.ಓ.ಸಿ ನೀಡಿದರೆ ನಾವು ಅನುಮತಿ ನೀಡಬೇಕಾಗುತ್ತದೆ ಎಂದು ತಹಸೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಉತ್ತರಪ್ರಭಕ್ಕೆ ತಿಳಿಸಿದರು.
ಈ ಕುರಿತು ಉತ್ತರಪ್ರಭ ಸರಣಿ ವರದಿ ಪ್ರಕಟಿಸಿತ್ತು.