ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಟ್ಟಿಗೆ ಅಡ್ಡೆಗಳಿಗೆ ಇಂದು ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಭೇಟಿ ನೀಡಿದರು.
ತಹಶೀಲ್ದಾರ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ, ಹೆಸ್ಕಾಂ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಟ್ಟಿಗೆ ಅಡ್ಡೆಗಳ ಮಾಲಿಕರಿಗೆ ದಾಖಲೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಡ್ಡೆ ನಡೆಸಲು ಪರವಾನಿಗೆ, ಎನ್.ಎ, ಕೈಗಾರಿಕೆ, ಅರಣ್ಯ ಇಲಾಖೆ ನೀಡಿದ ದಾಖಲೆಗಳನ್ನು ಮಂಗಳವಾರ ಸಂಜೆಯೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ದಾಖಲೆ ಸಲ್ಲಿಸದಿದ್ದರೆ ಮೊದಲ ಹಂತದಲ್ಲಿ ಕಟ್ಟಿಗೆ ಅಡ್ಡೆಗಳಿಗೆ ನೀಡಿದ ವಿದ್ಯುತ್ ಸಂಪರ್ಕ ಕಟ್ ಮಾಡಲಾಗುವುದು. ಎರಡನೇ ಹಂತದಲ್ಲಿ ಶಾಶ್ವತವಾಗಿ ಅಡ್ಡೆಗಳನ್ನು ಬಂದ್ ಮಾಡಿಸಲಾಗುವುದು. ಒಂದು ವೇಳೆ ಪರಿಸರ ಇಲಾಖೆ ಪರಿಶೀಲಿಸಿ ಎನ್.ಓ.ಸಿ ನೀಡಿದರೆ ನಾವು ಅನುಮತಿ ನೀಡಬೇಕಾಗುತ್ತದೆ ಎಂದು ತಹಸೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಉತ್ತರಪ್ರಭಕ್ಕೆ ತಿಳಿಸಿದರು.
ಈ ಕುರಿತು ಉತ್ತರಪ್ರಭ ಸರಣಿ ವರದಿ ಪ್ರಕಟಿಸಿತ್ತು.

Leave a Reply

Your email address will not be published. Required fields are marked *

You May Also Like

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

ಬೆಂಗಳೂರಿನತ್ತ ಮುಖ ಮಾಡಿದ ಜನರು!

ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ.…

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…