ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ ವೃದ್ಧ ಮಹಿಳೆಯ ಮೇಲೆ ಹರಿಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಆರೋಪಿ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ನನ್ನು ಸದ್ಯ ಬಂಧಿಸಲಾಗಿದೆ. ಪೂರ್ವ ದೆಹಲಿಯ ಘಾಜಿಪುರ ಪ್ರದೇಶದ ಚಿಲ್ಲಾ ಗ್ರಾಮದಲ್ಲಿ ನಿನ್ನೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮದ್ಯಪಾನ ಮಾಡಿ ಸಬ್ ಇನ್ಸ್ ಪೆಕ್ಟರ್ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಿರುವಾಗ ರಸ್ತೆ ಬದಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಚಾಲನೆಯಲ್ಲಿ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಾಯಿಸಿ ಮಹಿಳೆಯ ಮೇಲೆ ಹರಿಸಿದ್ದಲ್ಲದೆ ಕಾರಿನಡಿ ಮಹಿಳೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಗೊತ್ತಾದಾಗ ತಪ್ಪಿಸಿಕೊಂಡು ಹೋಗಲು ಸಬ್ ಇನ್ಸ್ ಪೆಕ್ಟರ್ ಯತ್ನಿಸಿದ್ದಾನೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಸಹಾಯದಿಂದ ಆರೋಪಿ ಸಬ್ ಇನ್ಸ್ ಪೆಕ್ಟರ್ ನನ್ನು ಬಂಧಿಸಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯಪಾನ ಮಾಡಿ ಮಹಿಳೆ ಮೇಲೆ ಕಾರು ಚಲಾಯಿಸಿ ಜೀವಕ್ಕೆ ಕುತ್ತು ತಂದ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ವಿರುದ್ಧ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.

ಮಳೆಗೆ ರಸ್ತೆ ಕುಸಿತ : ದುರಸ್ತೆಗೆ ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೊರೊನಾ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ- ಸಿ.ಸಿ.ಪಾಟೀಲ್

ಕೊರೋನಾದ ಪರಿಣಾಮದಿಂದ ಕಂಗಾಲಾದ ನಾವು ನೀವೆಲ್ಲರೂ ಇದೀಗ ಹೊರಗಡೆ ಬಂದಂತಾಗಿದೆ, ಸುಮಾರು ದಿನಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಪೂಜೆ ಮಾಡದೇ ಇರುವುದಕ್ಕೆ ಕಾರಣ ಈ ಮಹಾಮಾರಿ ಕರೋನ. ಇದರಿಂದ ದೇಶದ ಬೊಕ್ಕಸ, ರಾಜ್ಯದ ಬೊಕ್ಕಸ, ವ್ಯಾಪಾರಸ್ಥರಿಗೆ ಹಿನ್ನೆಡೆ ಮತ್ತು ಉದ್ಯಮಿಗಳಿಗೆ ಭಾರೀ ತೊಂದರೆ ಉಂಟಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.