ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ ವೃದ್ಧ ಮಹಿಳೆಯ ಮೇಲೆ ಹರಿಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಆರೋಪಿ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ನನ್ನು ಸದ್ಯ ಬಂಧಿಸಲಾಗಿದೆ. ಪೂರ್ವ ದೆಹಲಿಯ ಘಾಜಿಪುರ ಪ್ರದೇಶದ ಚಿಲ್ಲಾ ಗ್ರಾಮದಲ್ಲಿ ನಿನ್ನೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮದ್ಯಪಾನ ಮಾಡಿ ಸಬ್ ಇನ್ಸ್ ಪೆಕ್ಟರ್ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಿರುವಾಗ ರಸ್ತೆ ಬದಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಚಾಲನೆಯಲ್ಲಿ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಾಯಿಸಿ ಮಹಿಳೆಯ ಮೇಲೆ ಹರಿಸಿದ್ದಲ್ಲದೆ ಕಾರಿನಡಿ ಮಹಿಳೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಗೊತ್ತಾದಾಗ ತಪ್ಪಿಸಿಕೊಂಡು ಹೋಗಲು ಸಬ್ ಇನ್ಸ್ ಪೆಕ್ಟರ್ ಯತ್ನಿಸಿದ್ದಾನೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಸಹಾಯದಿಂದ ಆರೋಪಿ ಸಬ್ ಇನ್ಸ್ ಪೆಕ್ಟರ್ ನನ್ನು ಬಂಧಿಸಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯಪಾನ ಮಾಡಿ ಮಹಿಳೆ ಮೇಲೆ ಕಾರು ಚಲಾಯಿಸಿ ಜೀವಕ್ಕೆ ಕುತ್ತು ತಂದ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ವಿರುದ್ಧ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ

ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.

ಸಿಎಂ ಗಳಿಗೆ ಪಾಠ ಮಾಡುವುದರಿಂದ ಸೋಂಕು ನಿಯಂತ್ರಣವಾಗಲ್ಲ

ಪರದೆಯಲ್ಲಿ ಮುಖ ತೋರಿಸಿದರೆ ದೇಶದಲ್ಲಿ ಕೊರೊನಾ ಸೋಂಕು ಓಡಿಹೋಗಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದ ಅವರನ್ನು ಟೀಕಿಸಿದ್ದಾರೆ.

ಪುರಾಣ ಪ್ರವಚನ ಪ್ರಾರಂಭೋತ್ಸವ ಆಧ್ಯಾತ್ಮಿಕ ಜೀವನ ಚೈತ್ರವೇ ನವೋಲ್ಲಾಸಕ್ಕೆ ದಾರಿ- ರುದ್ರಮುನಿ ಶಿವಾಚಾರ್ಯ

ಉತ್ತರಪ್ರಭ ಸುದ್ದಿಆಲಮಟ್ಟಿ: ಧಾಮೀ೯ಕ ಪ್ರವಚನಗಳು ಆಲಿಸುವುದರಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ. ಒಳ್ಳೆಯ ವಿಚಾರಗಳು ಶ್ರವಣಗಳಿಗೆ…

ವೈದ್ಯಕೀಯ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ..!

ಉತ್ತರಪ್ರಭ ಸುದ್ದಿ ಕೊಪ್ಪಳ: ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನಡೆಯಬೇಕಿತ್ತು. ಆದರೆ…