ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಳೆ ಕರ್ಫ್ಯೂ ಜಾರಿಯಲ್ಲಿದೆ. ಆದರೆ, ಜನರು ಹೆದರಿ ತಮ್ಮ ಊರಿನತ್ತ ಮತ್ತೆ ಕಾಲು ಕೀಳುತ್ತಿದ್ದಾರೆ.
ಬೆಂಗಳೂರಿಗೆ ದುಡಿಯುವುದಕ್ಕಾಗಿ ವಲಸೆ ಬಂದಿದ್ದ ಜನರು ಮತ್ತೆ ಲಾಕ್ ಡೌನ್ ಆಗಬಹುದು ಎಂಬ ಭಯದಿಂದ ಮತ್ತೆ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಅನೇಕರು ಗಂಟು ಮೂಟೆ ಕಟ್ಟಿಕೊಂಡು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನವಯುಗ ಟೋಲ್ ಬಳಿ ಕಿಲೋಮೀಟರ್ ದೂರದವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.
ಮನೆಯ ಪಾತ್ರೆ, ಸಾಮಾನುಗಳು ಮತ್ತು ಪೀಠೋಪಕರಣಗಳ ಸಮೇತ ಗುಂಪು ಗುಂಪಾಗಿ ಜನರು ತೆರಳುತ್ತಿದ್ದಾರೆ. ತುಮಕೂರು ರಸ್ತೆ ಮಾತ್ರವಲ್ಲದೇ ಮೈಸೂರು ರಸ್ತೆಯಲ್ಲಿಯೂ ಟ್ರಾಫಿಕ್ ಜಾಮ್ ಆಗಿದೆ. ಸಾಲು ಸಾಲಾಗಿ ವಾಹನಗಳು ನಿಂತಿವೆ.
ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 8 ಗಂಟೆಯಿಂದ ಭಾನುವಾರ ಕರ್ಫ್ಯೂ ಜಾರಿಯಾಗಲಿದೆ. ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ. ತುರ್ತು, ಅಗತ್ಯಸೇವೆ ಹೊರತುಪಡಿಸಿ ಉಳಿದ ಕ್ಷೇತ್ರಗಳು, ವ್ಯಾಪಾರ – ವಹಿವಾಟು ಬಂದ್ ಆಗಿರಲಿದೆ.
ನಗರದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರು ಕೂಡ ಮತ್ತೆ ಲಾಕ್ಡೌೋನ್ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಗಿದಿವೆ. ಹೀಗಾಗಿ ಸೋಮವಾರದಿಂದ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಆಗಬಹುದು ಎಂದು ಎಲ್ಲರೂ ತಮ್ಮ ಊರುಗಳಿಗೆ ಹೊರಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ!: ವೈದ್ಯಕೀಯ ಶಿಕ್ಷಣ ಸಚಿವರಿಗೆ ಮಹಿಳಾ ವೈದ್ಯೆಯ ತರಾಟೆ!

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ. ಮೂವತ್ತು ಲಕ್ಷ ಪರಿಹಾರ ಕೊಟ್ಟು ಸಮಾಧಾನ ಮಾಡ್ತೀರೆನ್ರಿ. ನಿಮ್ಮದು ಒಂದು ಸರ್ಕಾರನೇನ್ರಿ? ಯಾರಿಗೆ ಬೇಕು ನಿಮ್ಮ ಹಣ ..? ಎಲ್ಲರೂ ಒಂದು ತಿಂಗಳ ಸಂಬಳ ಕೊಟ್ರೆ ಸಾಕು..! ಹಣಕೊಟ್ಟು ಸಮಾಧಾನ ಮಾಡ್ತಿರೇನ್ರೀ? ನನಗೆ ನಮ್ಮ ನಾಗೇಂದ್ರ ಬೇಕು.. ಇದು ಮಹಿಳಾ ವೈದ್ಯೆ ಒಬ್ಬರು ವೈದ್ಯಕೀಯ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪರಿ.

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.

ಗದಗ ಜಿಲ್ಲೆಯಲ್ಲಿ ಮತ್ತೆ ಮೂಡಿವೆ ಬಲ್ದೋಟ ಹೆಜ್ಜೆ.! : ಕಪ್ಪತ್ತಗುಡ್ಡಕ್ಕೆ ಕನ್ನಹಾಕಲು ನಡೆದಿದೆಯಾ ಯತ್ನ..?

ಇನ್ನೇನು ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಜೊತೆಗೆ ವನ್ಯಧಾಮ ಆಯಿತಲ್ಲ ಬಲ್ದೋಟ ಕಾಟ ತಪ್ಪಿತು ಅಂತ ಗದಗ ಜಿಲ್ಲೆಯ ಪರಿಸರ ಪ್ರೇಮಿಗಳು ಹಾಗೂ ಜೀವಪರ ಮನಸುಗಳು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಜಿಲ್ಲೆಯಲ್ಲಿ ಬಲ್ದೋಟ ಹೆಜ್ಜೆ ಮೂಡಿವೆ.

ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟ ಪತಿ!

ಪಂಜಾಬ್ : ಹೆಂಡತಿ ಸ್ನಾನ ಮಾಡುತ್ತಿದ್ದ ಫೋಟೋಗಳನ್ನೇ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.