ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ, ಅವರೆಲ್ಲ ಅಭಿಮಾನಿಗಳಿಗೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ, ಮಹಾಮಾರಿ ಹೋದ ಮೇಲೆ ಹಬ್ಬ ಆಚರಿಸೋಣ ಎಂದು ಕಿವಿ ಮಾತು ಹೇಳಿದ್ದಾರೆ. ಸದ್ಯ ಈಗ ಅಭಿಮಾನಿಗಳಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.


ಇದೇ ತಿಂಗಳ 12ರಂದು ಶಿವಣ್ಣ ಅವರ ಹುಟ್ಟು ಹಬ್ಬವಿದೆ. ಪ್ರತಿ ವರ್ಷ ಸಾವಿರಾರು ಅಭಿಮಾನಿಗಳು ಶಿವಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದ್ದರು. ಹೂವಿನ ಹಾರ, ಕೇಕ್ ತಂದು ಸಂಭ್ರಮಿಸುತ್ತಿದ್ದರು. ಆದರೆ ಈ ಕೊರೊನಾದಿಂದ ಯಾವುದೇ ಸಂಭ್ರಮಕ್ಕೂ ಅವಕಾಶವಿಲ್ಲ. ಹೀಗಾಗಿ ಈ ಬಾರಿ ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳದಿರಲು ನಿರ್ಧಾರಿಸಿದ್ದಾರೆ.
ನಟ ಶಿವರಾಜ್ಕುಲಮಾರ್ ಈ ಬಗ್ಗೆ ಇನ್ಸ್‌ಸ್ಟಾಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನೀವೆಲ್ಲರೂ ಆರೋಗ್ಯವಾಗಿ ಚೆನ್ನಾಗಿದ್ದೀರಿ ಎಂದುಕೊಂಡಿದ್ದೇನೆ. ನಾನು ಕೂಡ ಆರೋಗ್ಯವಾಗಿದ್ದೀನಿ, ನೀವು ಚೆನ್ನಾಗಿರಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಈ ತಿಂಗಳು ನನ್ನ ಹುಟ್ಟು ಹಬ್ಬವಿದೆ. ಆದರೆ ಆ ದಿನ ನಾನು ಮನೆಯಲ್ಲಿ ಇರಲ್ಲ. ಇಂತಹ ಸಂದರ್ಭದಲ್ಲಿ ನನ್ನ ಹುಟ್ಟು ಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೆಳ್ಳಂಬೆಳ್ಳಗ್ಗೆ ಫೀಲ್ಡ್‌ಗಿಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.

ಪಾಪ.. ಕೊಪ್ಪಳದಲ್ಲಿ ಭಿಕ್ಷೆಯೇ ಬದುಕಾಗಿಸಿಕೊಂಡವರ ಗತಿ ಏನು..?

ಕೊಪ್ಪಳ: ಮುಂಬೈಯಿಂದ ಪಿ-1173 ಸೋಂಕಿತ ಪ್ರಯಾಣಿಸಿದ್ದ ಬಸ್ ನಲ್ಲಿ 9 ಜನ ಭಿಕ್ಷುಕರು ಪ್ರಯಾಣಿಸಿದ್ದರಂತೆ. ಈ…

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆ!

ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ…