ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ, ಅವರೆಲ್ಲ ಅಭಿಮಾನಿಗಳಿಗೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ, ಮಹಾಮಾರಿ ಹೋದ ಮೇಲೆ ಹಬ್ಬ ಆಚರಿಸೋಣ ಎಂದು ಕಿವಿ ಮಾತು ಹೇಳಿದ್ದಾರೆ. ಸದ್ಯ ಈಗ ಅಭಿಮಾನಿಗಳಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.


ಇದೇ ತಿಂಗಳ 12ರಂದು ಶಿವಣ್ಣ ಅವರ ಹುಟ್ಟು ಹಬ್ಬವಿದೆ. ಪ್ರತಿ ವರ್ಷ ಸಾವಿರಾರು ಅಭಿಮಾನಿಗಳು ಶಿವಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದ್ದರು. ಹೂವಿನ ಹಾರ, ಕೇಕ್ ತಂದು ಸಂಭ್ರಮಿಸುತ್ತಿದ್ದರು. ಆದರೆ ಈ ಕೊರೊನಾದಿಂದ ಯಾವುದೇ ಸಂಭ್ರಮಕ್ಕೂ ಅವಕಾಶವಿಲ್ಲ. ಹೀಗಾಗಿ ಈ ಬಾರಿ ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳದಿರಲು ನಿರ್ಧಾರಿಸಿದ್ದಾರೆ.
ನಟ ಶಿವರಾಜ್ಕುಲಮಾರ್ ಈ ಬಗ್ಗೆ ಇನ್ಸ್‌ಸ್ಟಾಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನೀವೆಲ್ಲರೂ ಆರೋಗ್ಯವಾಗಿ ಚೆನ್ನಾಗಿದ್ದೀರಿ ಎಂದುಕೊಂಡಿದ್ದೇನೆ. ನಾನು ಕೂಡ ಆರೋಗ್ಯವಾಗಿದ್ದೀನಿ, ನೀವು ಚೆನ್ನಾಗಿರಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಈ ತಿಂಗಳು ನನ್ನ ಹುಟ್ಟು ಹಬ್ಬವಿದೆ. ಆದರೆ ಆ ದಿನ ನಾನು ಮನೆಯಲ್ಲಿ ಇರಲ್ಲ. ಇಂತಹ ಸಂದರ್ಭದಲ್ಲಿ ನನ್ನ ಹುಟ್ಟು ಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ: 1.25 ಲಕ್ಷ ಕ್ಯುಸೆಕ್ ನೀರು ಬಿಡುಗಡೆ “ಪ್ರವಾಹ ನಿಯಂತ್ರಣಕ್ಕೆ ಹಂತ ಹಂತ ಹೊರ ಹರಿವು ಹೆಚ್ಚಳ”

ಆಲಮಟ್ಟಿ: ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಆಲಮಟ್ಟಿ ಆಣೆಕಟ್ಟುಯಿಂದ 1.25 ಲಕ್ಷ ಕ್ಯುಸೆಕ್ ನೀರು…

ಸಿಎಂ ಪದಕಕ್ಕೆ 115 ಪೊಲೀಸ್ ಸಿಬ್ಬಂದಿ ಆಯ್ಕೆ

ಉತ್ತಮ ಸೇವೆ ಸಲ್ಲಿಸಿದ ರಾಜ್ಯದ 115 ಪೊಲೀಸ್ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ.

ತಮ್ಮ ಅಭ್ಯರ್ಥಿಗಳು ಗೆಲ್ಲಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇವರಗುಡ್ಡದ ಕಾರ್ಣಿಕ: ವ್ಯಾದಿ ಬೂದಿ ಆದಿತಲೆ ಸೃಷ್ಟಿ ಸಿರಿ ಆದಿತಲೇ ಪರಾಕ್!

ರಾಣೆಬೆನ್ನೂರ ತಾಲೂಕಿನ ದೇವರಗುಡ್ಡದ ಕರಿಯಾಲದಲ್ಲಿ ವಿಜಯದಶಮಿ ಪ್ರಯುಕ್ತ ಶನಿವಾರ ಸಂಜೆ ನಡೆದ ಕಾರ್ಣಿಕದ ನುಡಿಗಳು. ದೇವರಗುಡ್ಡ ಗ್ರಾಮದ ಗೊರವಯ್ಯ ಕಾರ್ಣಿಕ ನುಡಿದರು.