ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.

ಶ್ರೀಲಂಕಾದ ರಾಜಧಾನಿ ಕೊಲಂಬೊದ ಹೊರ ಭಾಗದಲ್ಲಿ ಸೈಕಲ್ ಸವಾರನಿಗೆ ಮೆಂಡಿಸ್ ಅವರ ಕಾರು ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕುಸಲ್ ಮೆಂಡಿಸ್ ಶ್ರೀಲಂಕಾದ ಪುನದುರಾ ಪ್ರದೇಶದಲ್ಲಿ ತನ್ನ ಎಸ್ಯುರವಿ ಕಾರನ್ನು ಡ್ರೈವ್ ಮಾಡಿಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವೇಳೆ

ಅಲ್ಲಿ ಸೈಕಲ್ ಓಡಿಸುತ್ತಿದ್ದ ಓರ್ವನಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹೀಗಾಗಿ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಕುಸಲ್ ಮಂಡಿಸ್ ಅವರನ್ನು ಬಂಧಿಸಿದ್ದು, ಅವರ ಕಾರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಮಾರ್ಚ್ ನಲ್ಲಿ ಶ್ರೀಲಂಕಾದಲ್ಲಿಯೇ ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದ 16 ಜನರಲ್ಲಿ ಮೆಂಡಿಸ್ ಕೂಡ ಇದ್ದರು. ಆದರೆ ಕೊರೊನ ವೈರಸ್ ಭೀತಿಯಿಂದ ಈ ಸರಣಿಯನ್ನು ರದ್ದುಮಾಡಲಾಗಿತ್ತು. ಈ ಹಿಂದೆ 2003ರಲ್ಲಿ ಶ್ರೀಲಂಕಾದ ಮಾಜಿ ಸ್ಪಿನ್ ಬೌಲರ್ ಕೌಶಲ್ ಲೋಕುರಾಚಿ ಅವರು ಕೂಡ ಮಹಿಳಾ ಪಾದಚಾರಿಗೆ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದರು. ಆಗ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆಯ ನಂತರ ಕೌಶಲ್ ಅವರನ್ನು ನಾಲ್ಕು ವರ್ಷ ಕ್ರಿಕೆಟಿನಿಂದ ಅಮಾನತು ಮಾಡಿ ಜೈಲಿಗೆ ಕೂಡ ಕಳುಹಿಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.

ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಕ್ಕೆ ಬ್ಲಾಕ್ & ವೈಟ್ ಅಲಿಗೇಶನ್ ಬಹಳಷ್ಟಿವೆ: ಸಿ.ಸಿ.ಪಾಟೀಲ್

ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ…

ರೈತರಿಂದ ಗ್ರಾಹಕರಿಗೆ ನೇರ ಮಾರಾಟಕ್ಕೆ ಕ್ರಮ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ

ರೈತರು ಬೆಳೆದ ತರಕಾರಿ ಹಾಗೂ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ತೆರೆಯಲಾದ ಮಳಿಗೆಗಳ ವಿವರ ಇಲ್ಲಿದೆ ನೋಡಿ

ಮಣ್ಣಿನ ಮಗನ ಹರುಷದ ಹುಣ್ಣಿಮೆ ಕಾರ ಹುಣ್ಣಿಮೆ

ಪ್ರತಿ ವರ್ಷವೂ ಕಾರ ಹುಣ್ಣಿಮೆ ಆಗಮಿಸಿತೆಂದರೆ ಅದು ಮುಂಗಾರಿನ ನಾಂದಿ ಎಂತಲೇ ಅರ್ಥ. ಈ ಕಾರ…