ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.

ಶ್ರೀಲಂಕಾದ ರಾಜಧಾನಿ ಕೊಲಂಬೊದ ಹೊರ ಭಾಗದಲ್ಲಿ ಸೈಕಲ್ ಸವಾರನಿಗೆ ಮೆಂಡಿಸ್ ಅವರ ಕಾರು ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕುಸಲ್ ಮೆಂಡಿಸ್ ಶ್ರೀಲಂಕಾದ ಪುನದುರಾ ಪ್ರದೇಶದಲ್ಲಿ ತನ್ನ ಎಸ್ಯುರವಿ ಕಾರನ್ನು ಡ್ರೈವ್ ಮಾಡಿಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವೇಳೆ

ಅಲ್ಲಿ ಸೈಕಲ್ ಓಡಿಸುತ್ತಿದ್ದ ಓರ್ವನಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹೀಗಾಗಿ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಕುಸಲ್ ಮಂಡಿಸ್ ಅವರನ್ನು ಬಂಧಿಸಿದ್ದು, ಅವರ ಕಾರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಮಾರ್ಚ್ ನಲ್ಲಿ ಶ್ರೀಲಂಕಾದಲ್ಲಿಯೇ ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದ 16 ಜನರಲ್ಲಿ ಮೆಂಡಿಸ್ ಕೂಡ ಇದ್ದರು. ಆದರೆ ಕೊರೊನ ವೈರಸ್ ಭೀತಿಯಿಂದ ಈ ಸರಣಿಯನ್ನು ರದ್ದುಮಾಡಲಾಗಿತ್ತು. ಈ ಹಿಂದೆ 2003ರಲ್ಲಿ ಶ್ರೀಲಂಕಾದ ಮಾಜಿ ಸ್ಪಿನ್ ಬೌಲರ್ ಕೌಶಲ್ ಲೋಕುರಾಚಿ ಅವರು ಕೂಡ ಮಹಿಳಾ ಪಾದಚಾರಿಗೆ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದರು. ಆಗ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆಯ ನಂತರ ಕೌಶಲ್ ಅವರನ್ನು ನಾಲ್ಕು ವರ್ಷ ಕ್ರಿಕೆಟಿನಿಂದ ಅಮಾನತು ಮಾಡಿ ಜೈಲಿಗೆ ಕೂಡ ಕಳುಹಿಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ರಾಜ್ಯದಲ್ಲಿಂದು ಮತ್ತೆ 69 ಕೊರೋನಾ ಕೇಸ್..!

ಇಂದು ಸಂಜೆ ಬಿಡುಗಡೆ ಮಾಡಿದ ಹೆಲ್ಥ್ ಬುಲಿಟಿನ್ ನಲ್ಲಿ ರಾಜ್ಯದಲ್ಲಿ ಇಂದು ಮತ್ತೆ 69 ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ 1056ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಕೇಂದ್ರ ಸರ್ಕಾರದ ನಡೆ ಸ್ವಾಗತಿಸಿದ ಪಿ.ಚಿದಂಬರಂ!

ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ.

ಬಿಜೆಪಿ ಸರಕಾರ ಬರಲು ಶ್ರಮಿಸಿ: ಮಾಜಿ ಶಾಸಕ‌ ಪ್ರತಾಪಗೌಡ ಕರೆ

ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌…