ಬೆಂಗಳೂರು: ಸತತ 3 ದಿನಗಳಿಂದ 1500ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಕಾಣತ್ತಿರುವ ರಾಜ್ಯದಲ್ಲಿ ಇಂದು 1,925 ಪ್ರಕರಣಗಳು ದಾಖಲಾಗುವ ಮೂಲಕ ಸೋಂಕಿನ ಸ್ಫೋಟ ಮುಂದುವರೆದಿದೆ.

ಈ 3 ದಿನದಲ್ಲಿ ಹಲವಾರು ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಅವರ ಸಂಬಂಧಿಕರು ಮತ್ತು ರಾಜಕೀಯ ಕಾಯಕರ್ತರಿಗೂ ಸೋಂಕು ತಗುಲಿರುವುದು ಸಮುದಾಯದಲ್ಲೂ ಸೋಂಕು ಹರಡಿರುವುದಕ್ಕೆ ಸಾಕ್ಷಿಯಾಗಿದೆ.

ರಾಜ್ಯದಲ್ಲಿಂದು 1925 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದಂತಾಗಿದ್ದಾರೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 23474 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 603. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 9847 ಕೇಸ್ ಗಳು. ರಾಜ್ಯದಲ್ಲಿ 13251 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 37 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 372 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1235
ದಕ್ಷಿಣ ಕನ್ನಡ- 147
ಬಳ್ಳಾರಿ-90
ವಿಜಯಪುರ-51
ಕಲಬುರಗಿ-49
ಉಡುಪಿ-45
ಧಾರವಾಡ -45
ಬೀದರ್-29
ಮೈಸೂರು-25
ಕೊಪ್ಪಳ-22
ಉತ್ತರ ಕನ್ನಡ-21
ಚಾಮರಾಜ ನಗರ-19
ಹಾವೇರಿ-15
ಹಾಸನ-14
ಚಿಕ್ಕಬಳ್ಳಾಪೂರ್-13
ತುಮಕೂರು-13
ಕೋಲಾರ್-13
ಬೆಳಗಾವಿ-11
ದಾವಣಗೆರೆ-11
ರಾಯಚೂರು-10
ಮಂಡ್ಯ-10
ಚಿಕ್ಕಮಗಳೂರು-09
ಶಿವಮೊಗ್ಗ-08
ಗದಗ-07
ರಾಮನಗರ-06
ಬಾಗಲಕೋಟೆ-04
ಚಿತ್ರದುರ್ಗ-03

Leave a Reply

Your email address will not be published. Required fields are marked *

You May Also Like

ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ

ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…

ಹೆತ್ತವರನ್ನೇ ಹತ್ಯೆಗೈದ ಪಾಪಿ ಮಗ..!

ತಂದೆ ತಾಯಿಯೇ ದೇವರು ಎಂದು ಪೂಜಿಸುವ ಈ ಕಾಲದಲ್ಲಿ ಇಲ್ಲೋಬ್ಬ ಪಾಪಿ ಮಗನೊಬ್ಬ ತನ್ನ ಹೆತ್ತವರನ್ನೇ ಕಬ್ಬಿಣದ ರಾಡ್​​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…