ದಾವಣಗೆರೆ: ಕೊರೊನಾ ಪಾಸಿಟಿವ್ ಎಂದು ಚಿಕಿತ್ಸೆಗೆ ದಾಖಲಾದ ರೋಗಿ ಎಂದು ಹೇಳಲಾದ ವ್ಯಕ್ತಿ ಮತ್ತೊಬ್ಬರೊಂದಿಗೆ ಮೊಬೈಲ್ ನಲ್ಲಿ ಮಾತಾಡಿದ್ದು, ಇದರಲ್ಲಿ ತಮಗೆ ಚಿಕಿತ್ಸೆಯನ್ನೇ ನೀಡಿಲ್ಲ ಎಂದು ಮಾತಾಡಿಕೊಂಡಿದ್ದಾರೆ. ಇದರಿಂದ ಕೊರೊನಾ ಹೆಸರಲ್ಲಿ ರಾಜ್ಯದಲ್ಲಿಯೂ ಲೂಟಿ ನಡೆದಿದೆಯಾ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ ವ್ಯಕ್ತಿಯೊಂದಿಗೆ ಮತ್ತೊಬ್ಬರು ನಡೆಸಿದ ಮೊಬೈಲ್ ಸಂಭಾಷಣೆ ಇಂಥ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಆಡಿಯೋದಲ್ಲಿ ಉಲ್ಲೇಖವಾಗುವ ಮಾಹಿತಿಗಳ ಸತ್ಯಾಸತ್ಯತೆಯನ್ನು ಉತ್ತರಪ್ರಭ ಪರಿಶೀಲಿಸಿಲ್ಲ.

ಈ ಕುರಿತು ಸರ್ಕಾರ, ಸಚಿವರು, ಮೇಲಧಿಕಾರಿಗಳು ಗಮನ ನೀಡಬೇಕಿದೆ. ಜೊತೆಗೆ, ರಾಜ್ಯ ಸರ್ಕಾರದ ವಿರುದ್ಧ ಕೂಡ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತಿತರರು ಕೂಡ ಅವ್ಯವಹಾರದ ಆರೋಪವನ್ನು ಹೊರಿಸಿದ್ದಾರೆ. ಇಂತಹ ಸಮಯದಲ್ಲಿ ಈ ಆಡಿಯೋ ಕುರಿತು ಯಾರು ತನಿಖೆ ಮಾಡುತ್ತಾರೆ? ಸತ್ಯ ಹೇಗೆ ಹೊರಬರುತ್ತದೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುವುದು ಕೂಡ ಅಸಾಧ್ಯವೇನೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

You May Also Like

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.

ಪಿಎಂ ಕೇರ್ಸ್ ಅಡಿ ಸಂಗ್ರಹವಾದ ಮೊತ್ತದ ಲೆಕ್ಕ ಕೊಡಿ: ಸಿದ್ದರಾಮಯ್ಯ

ಬೆಂಳೂರು: ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ…

ಮರಗಳಿಗೆ ಕತ್ತರಿ: ಅರಣ್ಯಾಧಿಕಾರಿಗಳ ಅಮಾನತು

ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಮಾಫಿ ಪಾಸ್ ಹೆಸರಲ್ಲಿ ಕಾಡುಗಳ ಮರಗಳನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅರಣ್ಯ ಇಲಾಖೆ ನೌಕರರನ್ನು ಅಮಾನತುಗೊಳಿಸಲಾಗಿದೆ. ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪವಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆಯ ನಾಲ್ಕು ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಇಟಗಿ ಗ್ರಾಮದ ವಾರ್ಡ ನಂ. 4ರ ಎರಡು ಪ್ರದೇಶಗಳನ್ನು, ಲಕ್ಷ್ಮೇಶ್ವರ…