ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಹಾಗೂ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಟ್ಟದಳ್ಳಿ ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು ಪ್ರವಾಸಿಗರ ವಾಹನಗಳನ್ನು ತಡೆದು ಮರಳಿ ಕಳುಹಿಸಿದ್ದಾರೆ. ನಗರ ಪ್ರದೇಶದಲ್ಲಿದ್ದ ಸೋಂಕು ಈಗ ಗ್ರಾಮೀಣ ಭಾಗದಲ್ಲಿಯೂ ವ್ಯಾಪಕವಾಗಿ ಹರಡುತ್ತಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸುವ, ಬೆಟ್ಟದ ಮೇಲೆ ಟ್ರೆಕ್ಕಿಂಗ್‌ ಮಾಡುವ ನೆಪದಲ್ಲಿ ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಬೇಕಾಗಿದೆ. ಈಗಂತೂ ಕೊರೊನಾ ಭಯದಿಂದ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.

ಬಾರ್ ಅಂಗಡಿಗಳನ್ನು ಬಂದ್ ಮಾಡಿಸಿದ ಮಹಿಳೆಯರು

ಹೆಣ್ಮಕ್ಕಳೇ ಸ್ಟ್ರಾಂಗೂ ಗುರೂ..! ಅನ್ನೋದ್ರಿಲ್ಲ ಡೌಟೇ ಇಲ್ಲ. ಮದ್ಯ ಮಾರಾಟದ ದಿನವೇ ಕುಡುಕರ ಕಿಕ್ ಇಳಿಸುವ ಮೂಲಕ ವನಿತೆಯರು ಇದಕ್ಸಿಕೆ ಉದಾಹರಣೆಯಾಗಿದ್ದಾರೆ.

ಪಕ್ಷದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆದಿರುವ ಬಿ.ಎಸ್. ಯಡಿಯೂರಪ್ಪ

ಆಲಮಟ್ಟಿ:ಬಿ.ಎಸ್.ಯಡಿಯೂರಪ್ಪ, ರಾಜಕಾರಣದಿಂದ ನಿವೃತ್ತಿಯಾಗಲ್ಲ, ಅವರು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತರಾಗುತ್ತಾರೆ, ಪಕ್ಷಕ್ಕೆ ಕೋಚ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ…