ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಹಾಗೂ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಟ್ಟದಳ್ಳಿ ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು ಪ್ರವಾಸಿಗರ ವಾಹನಗಳನ್ನು ತಡೆದು ಮರಳಿ ಕಳುಹಿಸಿದ್ದಾರೆ. ನಗರ ಪ್ರದೇಶದಲ್ಲಿದ್ದ ಸೋಂಕು ಈಗ ಗ್ರಾಮೀಣ ಭಾಗದಲ್ಲಿಯೂ ವ್ಯಾಪಕವಾಗಿ ಹರಡುತ್ತಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸುವ, ಬೆಟ್ಟದ ಮೇಲೆ ಟ್ರೆಕ್ಕಿಂಗ್‌ ಮಾಡುವ ನೆಪದಲ್ಲಿ ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಬೇಕಾಗಿದೆ. ಈಗಂತೂ ಕೊರೊನಾ ಭಯದಿಂದ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಸೋಂಕಿನ ಲಕ್ಷಣವಿಲ್ಲದಿದ್ರು ಸೋಂಕು ಪತ್ತೆಯಾಗ್ತಿದೆ: ಶಾಕಿಂಗ್ ನ್ಯೂಸ್..!

ದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗಿದೆ. ಆದರೆ ಸೋಂಕಿನ…

ನಟಿ ಜಸ್ಲೀನ್ ಅವತಾರಕ್ಕೆ ನೆಟ್ಟಿಗರು ಶಾಕ್!

ಸೆಲೆಬ್ರಟಿಗಳಿಗೆ ಅದೆಂತೆಂಥಾ ಹುಚ್ಚಿರುತ್ತೆ ಅಂತ ಊಹಿಸೋಕು ಆಗಲ್ಲ. ಪ್ರಚಾರಕ್ಕಾಗಿ ಎಂತೆಂಥ ಚಿತ್ರವಿಚಿತ್ರ ಅವತಾರ ತಾಳುತ್ತಾರೆ ಅಂತ ಕಲ್ಪನೆಗೂ ಅಸಾಧ್ಯ. ಇಂತಹ ಪ್ರಚಾರದ ಗೀಳಿಗೆ ಬಿದ್ದ ನಟಿಯೊಬ್ಬರು ಇದೀಗ ನೆಟ್ಟಿಗರಿಗೆ ಶಾಕ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಮಡದಿ ಮಾಂಗಲ್ಯ ಸರ ಮಾರಿ ಕುಡಿದ ಆತ ಮಾಡಿದ್ದೇನು?

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿದ್ದ ಪಾಪಿ ಪತಿಯೊಬ್ಬ ಮಡದಿಯನ್ನೇ ಕೊಲೆ ಮಾಡಿರುವ ಘಟನೆ ಚೇಳೂರು ಪೊಲೀಸ್‌ ಠಾಣೆ…