ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಹಾಗೂ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಟ್ಟದಳ್ಳಿ ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು ಪ್ರವಾಸಿಗರ ವಾಹನಗಳನ್ನು ತಡೆದು ಮರಳಿ ಕಳುಹಿಸಿದ್ದಾರೆ. ನಗರ ಪ್ರದೇಶದಲ್ಲಿದ್ದ ಸೋಂಕು ಈಗ ಗ್ರಾಮೀಣ ಭಾಗದಲ್ಲಿಯೂ ವ್ಯಾಪಕವಾಗಿ ಹರಡುತ್ತಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸುವ, ಬೆಟ್ಟದ ಮೇಲೆ ಟ್ರೆಕ್ಕಿಂಗ್‌ ಮಾಡುವ ನೆಪದಲ್ಲಿ ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಬೇಕಾಗಿದೆ. ಈಗಂತೂ ಕೊರೊನಾ ಭಯದಿಂದ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ಯಾಂಗೊಲಿನ್ ಗೂ ನಡೆಯಿತು ಕೊರೊನಾ ಪರೀಕ್ಷೆ!

ಕ್ವಾರಂಟೈನ್ ಸೆಂಟರ್ ಬಳಿ ಹೆಣ್ಣು ಪ್ಯಾಂಗೊಲಿನ್ ಗೆ ಕೊರೊನಾ ಪರೀಕ್ಷೆ ನಡೆದಿದೆ. ಬಾರಂಬಾ ವಲಯದ ಮಹುಲಿಯಾ ಯುಜಿಎಂಇ ಶಾಲೆಯ ಬಳಿ ತೆರೆಯಲಾಗಿರುವ ಕ್ವಾರಂಟೈನ್ ಕೇಂದ್ರದ ಬಳಿ ಐದು ವರ್ಷದ ಹೆಣ್ಣು ಪ್ಯಾಂಗೊಲಿನ್ ನನ್ನು ರಕ್ಷಿಸಲಾಗಿತ್ತು.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.