ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ಆಸ್ಪತ್ರೆಗೆ ಹೋಗಲು ರಂಪಾಟ ಮಾಡಿದ್ದಾರೆ. ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲಿಯೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದರು. ಅಲ್ಲದೇ ಆರೋಗ್ಯ ಸಚಿವ ಶ್ರೀರಾಮುಲು ಅವರ ಜೊತೆ ನಾನು ಮಾತನಾಡಿದ್ದೇನೆ. ಹೀಗಾಗಿ ನಾನು ಮನೆಯಲ್ಲೇ ಇರುತ್ತೀನಿ ಎಂದು ಕಿರಿಕ್ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಮನೆಯ ಮುಂದೆ ಸೋಂಕಿತ ಮುಖಂಡ ಹೈಡ್ರಾಮಾ ಮಾಡಿದ್ದಾರೆ. ಟಿಎಚ್ಓಿ ಡಾ.ಧನಂಜಯ್ ಸೇರಿದಂತೆ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಆಸ್ಪತ್ರೆಗೆ ಹೋಗಲು ಜೆಡಿಎಸ್ ಮುಖಂಡನ ಒಪ್ಪದೇ ಪಟ್ಟು ಹಿಡಿದಿದ್ದರು.

ಕೆಲವು ರಾಜಕಾರಣಿಗಳಿಂದ ಅಧಿಕಾರಿಗಳಿಗೆ ಫೋನ್ ಮಾಡಿಸುವ ಮೂಲಕ ಮರಳಿ ಹೋಗುವಂತೆ ಒತ್ತಡ ಹಾಕಿದ್ದಾರೆ. ಸತತ ಒಂದು ಗಂಟೆ ಮನವೊಲಿಕೆ ಬಳಿಕ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಸುಮಾರು ಒಂದು ಗಂಟೆಯ ಸಮಯ ಜೆಡಿಎಸ್ ಮುಖಂಡನ ಮನೆಯ ಮುಂದೆ ಅಂಬುಲೆನ್ಸ್ ನಿಲ್ಲಿಸಿಕೊಂಡು ಸಿಬ್ಬಂದಿ ನಿಂತಿದ್ದರು.

Leave a Reply

Your email address will not be published. Required fields are marked *

You May Also Like

ಚಿರಂಜೀವಿ ಸರ್ಜಾ ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ ಮೇಘನಾ..!

ಬೆಂಗಳೂರು: ಇತ್ತಿಚೆಗಷ್ಟೆ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ಬಹುಬೇಗ ಮರೆಯುವಂತಹ ನಟನಲ್ಲ. ಅದರಲ್ಲೂ 10…

ಗದಗನಲ್ಲಿ ಕೊರೊನಾ ಭೀತಿ: ನರಳುತ್ತಿರುವ ವ್ಯಕ್ತಿಗೆ ನೆರವು ನೀಡಲು ಭಯಪಟ್ಟ ಜನತೆ!

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ. ಹೊಟ್ಟೆ ನೋವಿನಿಂದ ನರಳುತ್ತಿದ್ದ ವ್ಯಕ್ತಿ ನೆರುವಿಗೆ ಯಾರೊಬ್ಬರು ಮುಂದಾಗದ ಅಮಾನವೀಯ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.

ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ

ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.

ಧೋನಿಗಿಂದು ಜನ್ಮದಿನ: ವಯಸ್ಸು ನಲವತ್ತು, ಹಂಗೇ ಇದೆ ಗೆಲ್ಲುವ ತಾಕತ್ತು

ನವದೆಹಲಿ: ಮ್ಯಾಚ್ ವಿನ್ನರ್ ಮಹೇಂದ್ರ ಸಿಂಗ್ ಧೋನಿ ಇಂದು ತಮ್ಮ 40ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.…