ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ಆಸ್ಪತ್ರೆಗೆ ಹೋಗಲು ರಂಪಾಟ ಮಾಡಿದ್ದಾರೆ. ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲಿಯೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದರು. ಅಲ್ಲದೇ ಆರೋಗ್ಯ ಸಚಿವ ಶ್ರೀರಾಮುಲು ಅವರ ಜೊತೆ ನಾನು ಮಾತನಾಡಿದ್ದೇನೆ. ಹೀಗಾಗಿ ನಾನು ಮನೆಯಲ್ಲೇ ಇರುತ್ತೀನಿ ಎಂದು ಕಿರಿಕ್ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಮನೆಯ ಮುಂದೆ ಸೋಂಕಿತ ಮುಖಂಡ ಹೈಡ್ರಾಮಾ ಮಾಡಿದ್ದಾರೆ. ಟಿಎಚ್ಓಿ ಡಾ.ಧನಂಜಯ್ ಸೇರಿದಂತೆ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಆಸ್ಪತ್ರೆಗೆ ಹೋಗಲು ಜೆಡಿಎಸ್ ಮುಖಂಡನ ಒಪ್ಪದೇ ಪಟ್ಟು ಹಿಡಿದಿದ್ದರು.

ಕೆಲವು ರಾಜಕಾರಣಿಗಳಿಂದ ಅಧಿಕಾರಿಗಳಿಗೆ ಫೋನ್ ಮಾಡಿಸುವ ಮೂಲಕ ಮರಳಿ ಹೋಗುವಂತೆ ಒತ್ತಡ ಹಾಕಿದ್ದಾರೆ. ಸತತ ಒಂದು ಗಂಟೆ ಮನವೊಲಿಕೆ ಬಳಿಕ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಸುಮಾರು ಒಂದು ಗಂಟೆಯ ಸಮಯ ಜೆಡಿಎಸ್ ಮುಖಂಡನ ಮನೆಯ ಮುಂದೆ ಅಂಬುಲೆನ್ಸ್ ನಿಲ್ಲಿಸಿಕೊಂಡು ಸಿಬ್ಬಂದಿ ನಿಂತಿದ್ದರು.

Leave a Reply

Your email address will not be published. Required fields are marked *

You May Also Like

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.

ಮಧುಮಗನ ತಾಯಿಗೆ ಕೊರೊನಾ ಪಾಸಿಟಿವ್ ಮದುವೆ ರದ್ದು

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು…

ದೇಶದ ನಕ್ಷೆ ತಪ್ಪಾಗಿ ತೋರಿಸಿದ್ದಕ್ಕೆ ಟ್ವೀಟರ್ ನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸರ್ಕಾರ!

ನವದೆಹಲಿ : ಟ್ವೀಟರ್ ನಲ್ಲಿ ತಪ್ಪಾಗಿ ಭಾರತೀಯ ನಕ್ಷೆ ತೋರಿಸಿದ್ದಕ್ಕೆ ಕೇಂದ್ರ ಸರ್ಕಾರವು ಟ್ವೀಟರ್ ಸಿಇಓ ಜಾಕ್ ಡೋರ್ಸಿ ಅವರಿಗೆ ಪತ್ರ ಬರೆದಿದೆ.