ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದಾಗಿ ಪರಿಸ್ಥಿತಿ ಹದಗೆಟ್ಟಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಬೆಂಗಳೂರು ತೊರೆಯಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಗೆ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಲಾಕ್ ಡೌನ್ ಭೀತಿ ಯಿಂದ ನಗರವನ್ನು ಬಿಟ್ಟು ತಮ್ಮ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ಹಳ್ಳಿಗಳಲ್ಲಿ ಸೋಂಕಿನ ಭಯ ಹೆಚ್ಚಾಗುತ್ತಿದೆ. ಹೀಗಾಗಿ ಜನರು ದಯವಿಟ್ಟು ಬೆಂಗಳೂರಿನಲ್ಲಿ ಸುರಕ್ಷತೆಯಿಂದ ಇರಿ. ಸರ್ಕಾರ ಲಾಕ್ ಡೌನ್ ಮಾಡುವುದಿಲ್ಲ. ಲಾಕ್ ಡೌನ್ ಆಗುತ್ತದೆ ಎಂದು ಭಯ ಪಡಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಸಿಎಂ ಅವರ ನಿರ್ಣಯದಂತೆ ಪ್ರತಿ ಭಾನುವಾರ ಲಾಕ್ ಡೌನ್ ಆಗಿರುತ್ತದೆ. ಜನರು ಸ್ವಯಂ ಪ್ರೇರಿತರಾಗಿ ಕರ್ಪ್ಯೂಗೆ ಬೆಂಬಲ ಕೊಟ್ಟು ಸ್ವಯಂ ಲಾಕ್ ಆಗಿದ್ದಾರೆ. ನಗರದಲ್ಲಿ ವಾಹನ ಸಂಚಾರ ವಿರಳವಾಗಿದೆ. ಜನ‌ರೂ ಕೂಡಾ ಅನಗತ್ಯವಾಗಿ ಹೊರಗಡೆ ಬಂದಿಲ್ಲ. ಜನರು ತಾವೇ ನಿಯಂತ್ರಣ ಹೇರಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕೊರೋನಾ ವಾರಿಯರ್ ಗಳಾದ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದೆ. ಮೂರು ತಿಂಗಳಿಂದ ನಿಮ್ಮನ್ನು ಕಾಯುತ್ತಿರುವ ಕೊರೋನಾ ವಾರಿಯರ್ ಗಳು ಸುರಕ್ಷತೆಯಿಂದ ಇರಬೇಕು ಎಂದರೆ ದಯವಿಟ್ಟು ಜನರು ಸಹಕಾರ ನೀಡಬೇಕು. ಪ್ರತಿ ದಿನ ಐದಾರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಆಗುತ್ತಿವೆ. ಪೊಲೀಸರ ಹಿತದೃಷ್ಟಿಯಿಂದ ಅವರ ಆರೋಗ್ಯ ತಪಾಸಣೆ, ಟೆಸ್ಟಿಂಗ್ ಟ್ರೀಟ್ ಮೆಂಟ್ ಗೆ ಮತ್ತಷ್ಟು ಆದ್ಯತೆ ನೀಡುತ್ತೇವೆ ಎಂದು ಗೃಹ ಸಚಿವರು ಭರವಸೆ ನೀಡಿದರು.

Leave a Reply

Your email address will not be published. Required fields are marked *

You May Also Like

ಮಹಿಳಾ ಮಣಿಗಳ ಅಧಿಪತ್ಯಪ್ರಾರಂಭ: ಬಿಜೆಪಿಗೆ ರಾಮನಿಂದ ಪಟ್ಟಾಭಿಷೇಕ,ಕಾನೂನು ಹೋರಾಟ -ಎಚ್ ಕೆ ಪಾಟೀಲ

ಉತ್ತರಪ್ರಭ ಸುದ್ದಿಗದಗ: ಕಾಂಗ್ರೆಸ್‌ನ ಹಿಡಿತದಲ್ಲಿದ್ದ ನಗರಸಭೆ ಗದ್ದುಗೆ ದಶಕಗಳ ಬಳಿಕ ಬಿಜೆಪಿ ಪಾಲು, ಬಿಜೆಪಿಯಲ್ಲಿ ಸಂಭ್ರಮ…

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ರಾಜ್ಯಪಾಲ ಆಗಮನ- ಆಲಮಟ್ಟಿ ಫೂಲ್ ಟೈಟ್ : ಎತ್ತ ನೋಡಿದರೂ ಪೋಲೀಸ್ ಸರ್ಪಗಾವಲು-ಬಿಗಿ ಭದ್ರತೆ

ಉತ್ತರಪ್ರಭಆಲಮಟ್ಟಿ: ರಾಜ್ಯಪಾಲ ಥಾವರ್ ಚೆಂದ ಗೆಹ್ಲೂಟ್ ಮಂಗಳವಾರ ಮುಸ್ಸಂಜೆ ಆಗಮನದ ಹಿನ್ನಲೆಯಲ್ಲಿ ಕೃಷ್ಣಾ ತೀರದ ಹಸಿರು…

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.