ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದಾಗಿ ಪರಿಸ್ಥಿತಿ ಹದಗೆಟ್ಟಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಬೆಂಗಳೂರು ತೊರೆಯಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಗೆ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಲಾಕ್ ಡೌನ್ ಭೀತಿ ಯಿಂದ ನಗರವನ್ನು ಬಿಟ್ಟು ತಮ್ಮ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ಹಳ್ಳಿಗಳಲ್ಲಿ ಸೋಂಕಿನ ಭಯ ಹೆಚ್ಚಾಗುತ್ತಿದೆ. ಹೀಗಾಗಿ ಜನರು ದಯವಿಟ್ಟು ಬೆಂಗಳೂರಿನಲ್ಲಿ ಸುರಕ್ಷತೆಯಿಂದ ಇರಿ. ಸರ್ಕಾರ ಲಾಕ್ ಡೌನ್ ಮಾಡುವುದಿಲ್ಲ. ಲಾಕ್ ಡೌನ್ ಆಗುತ್ತದೆ ಎಂದು ಭಯ ಪಡಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಸಿಎಂ ಅವರ ನಿರ್ಣಯದಂತೆ ಪ್ರತಿ ಭಾನುವಾರ ಲಾಕ್ ಡೌನ್ ಆಗಿರುತ್ತದೆ. ಜನರು ಸ್ವಯಂ ಪ್ರೇರಿತರಾಗಿ ಕರ್ಪ್ಯೂಗೆ ಬೆಂಬಲ ಕೊಟ್ಟು ಸ್ವಯಂ ಲಾಕ್ ಆಗಿದ್ದಾರೆ. ನಗರದಲ್ಲಿ ವಾಹನ ಸಂಚಾರ ವಿರಳವಾಗಿದೆ. ಜನ‌ರೂ ಕೂಡಾ ಅನಗತ್ಯವಾಗಿ ಹೊರಗಡೆ ಬಂದಿಲ್ಲ. ಜನರು ತಾವೇ ನಿಯಂತ್ರಣ ಹೇರಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕೊರೋನಾ ವಾರಿಯರ್ ಗಳಾದ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದೆ. ಮೂರು ತಿಂಗಳಿಂದ ನಿಮ್ಮನ್ನು ಕಾಯುತ್ತಿರುವ ಕೊರೋನಾ ವಾರಿಯರ್ ಗಳು ಸುರಕ್ಷತೆಯಿಂದ ಇರಬೇಕು ಎಂದರೆ ದಯವಿಟ್ಟು ಜನರು ಸಹಕಾರ ನೀಡಬೇಕು. ಪ್ರತಿ ದಿನ ಐದಾರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಆಗುತ್ತಿವೆ. ಪೊಲೀಸರ ಹಿತದೃಷ್ಟಿಯಿಂದ ಅವರ ಆರೋಗ್ಯ ತಪಾಸಣೆ, ಟೆಸ್ಟಿಂಗ್ ಟ್ರೀಟ್ ಮೆಂಟ್ ಗೆ ಮತ್ತಷ್ಟು ಆದ್ಯತೆ ನೀಡುತ್ತೇವೆ ಎಂದು ಗೃಹ ಸಚಿವರು ಭರವಸೆ ನೀಡಿದರು.

Leave a Reply

Your email address will not be published. Required fields are marked *

You May Also Like

ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ

ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.

ಜೆಡಿಎಸ್ ಸ್ಥಾನ ಕಬಳಿಸಲು ಬಿಜೆಪಿ ಹೊಂಚು – ರೇವಣ್ಣ!

ಹಾಸನ : ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ಅಂತಿಮಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ಹೊರ ಹಾಕಿದ್ದಾರೆ.

ಮಳೆಗೆ ರಸ್ತೆ ಕುಸಿತ : ದುರಸ್ತೆಗೆ ಆಗ್ರಹ

ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.

ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶಿಸುವುದು ಯಾವಾಗ ಗೊತ್ತಾ?

ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ