ಬೆಂಗಳೂರು : ಮತ್ತು ಬರುವ ಔಷಧಿ ಕುಡಿಸಿ ನಟಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.
ಮೋಹಿತ್ ಎಂಬ ವ್ಯಕ್ತಿಯಿಂದಲೇ ಈ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ. ಈ ವ್ಯಕ್ತಿ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ.
ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್ನ ಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ ನಟಿಯನ್ನು ಪರಿಚಯ ಮಾಡಿಕೊಂಡಿದ್ದ. ಪರಿಚಯ ಸ್ನೇಹವಾಗಿ ಮೋಹಿತ್ ನಟಿಯ ಜೊತೆ ಸಲುಗೆ ಬೆಳೆಸಿದ್ದ. ನಂತರ ಆರೋಪಿ ಮೋಹಿತ್ ನಟಿಯ ಹುಟ್ಟು ಹಬ್ಬವನ್ನು ತನ್ನ ಮನೆಯಲ್ಲಿಯೇ ಆಯೋಜಿಸಿದ್ದ.
ಈ ಸಂದರ್ಭದಲ್ಲಿ ನಟಿಗೆ ಜ್ಯೂಸಿನಲ್ಲಿ ಮತ್ತು ಬರುವ ಮಾತ್ರೆ ಹಾಕಿದ್ದಾನೆ.. ಅದನ್ನು ಕುಡಿದ ನಟಿ ಪ್ರಜ್ಞೆ ತಪ್ಪಿದ್ದು, ಬಳಿಕ ಅತ್ಯಾಚಾರ ಎಸಗಿದ್ದಾನೆ. ಮರುದಿನ ಬೆಳಗ್ಗೆ ನಟಿಗೆ ನಿನ್ನನ್ನು ಅತ್ಯಾಚಾರ ಮಾಡಿರುವುದಾಗಿ ಆರೋಪಿ ಮೋಹಿತ್ ತಿಳಿಸಿ ಬೆದರಿಕೆ ಹಾಕಿದ್ದಾನೆ.
ಆರೋಪಿ ಮೋಹಿತ್, ಮೊಬೈಲ್ನ್ಲ್ಲಿ ಎಲ್ಲಾವೂ ರೆಕಾರ್ಡ್ ಆಗಿದೆ. ನಾನು ಹೇಳಿದಂತೆ ಕೇಳಬೇಕು ಎಂದು ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲದೇ ಮೊಬೈಲ್ ತೋರಿಸಿ ಮತ್ತೆ ಅತ್ಯಾಚಾರ ಮಾಡಿದ್ದಾನೆ. ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ವಿಡಿಯೋವನ್ನು ಯೂಟ್ಯೂಬ್ಗೆ್ ಹಾಕುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ಇದೇ ರೀತಿ ಬೆದರಿಕೆ ಹಾಕಿ ಸುಮಾರು ರೂ. 20 ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದಾನೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಕುರಿತು ಜೆ.ಜೆ. ನಗರ ಪೊಲೀಸ್ ಠಾಣೆಯಲ್ಲಿ ನಟಿ ದೂರು ದಾಖಲಿಸಿದ್ದಾರೆ. ನಟಿ ದೂರು ನೀಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಭಿಮಾನಕ್ಕಾಗಿ ನನ್ನ ಕಣ್ಣಾಲೆಗಳು ತುಂಬಿಕೊಂಡ ಕ್ಷಣ ಅದು..

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಬಗೆಗೆ ನೀವೆಲ್ಲ ತೋರಿಸುತ್ತಿರುವ ಅಕ್ಕರೆ, ಅಭಿಮಾನ ನಮ್ಮ ಉತ್ಸಾಹ ಹೆಚ್ಚಿಸಿದೆ. ಇನ್ನು ಕೆಲ ದಿನಗಳಲ್ಲಿಯೇ ಪತ್ರಿಕೆಯನ್ನು ಆರಂಭಿಸುವ ನಮ್ಮ ಕನಸಿಗೆ ನಿಮ್ಮ ಅಭಿಮಾನ ಬಣ್ಣ ತುಂಬಿದೆ

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಏಡ್ಸ್ ರೋಗ ಹತ್ತಿಕ್ಕಲು ಜನಜಾಗೃತಿ ಹೆಚ್ಚಳ-ಬಾಬುರಾವ ತಳವಾರ

ಆಲಮಟ್ಟಿ: 2030 ರೊಳಗೆ ಭಾರತದಲ್ಲಿ ಮಹಾಮಾರಿ ಏಡ್ಸ್ ರೋಗದ ಹಾವಳಿ ಸಂಪೂರ್ಣವಾಗಿ ತಡೆಗಟ್ಟಬೇಕಿದೆ. ಈ ಮಾರಕ…

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.