ಬೆಂಗಳೂರು : ಮತ್ತು ಬರುವ ಔಷಧಿ ಕುಡಿಸಿ ನಟಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.
ಮೋಹಿತ್ ಎಂಬ ವ್ಯಕ್ತಿಯಿಂದಲೇ ಈ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ. ಈ ವ್ಯಕ್ತಿ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ.
ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್ನ ಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ ನಟಿಯನ್ನು ಪರಿಚಯ ಮಾಡಿಕೊಂಡಿದ್ದ. ಪರಿಚಯ ಸ್ನೇಹವಾಗಿ ಮೋಹಿತ್ ನಟಿಯ ಜೊತೆ ಸಲುಗೆ ಬೆಳೆಸಿದ್ದ. ನಂತರ ಆರೋಪಿ ಮೋಹಿತ್ ನಟಿಯ ಹುಟ್ಟು ಹಬ್ಬವನ್ನು ತನ್ನ ಮನೆಯಲ್ಲಿಯೇ ಆಯೋಜಿಸಿದ್ದ.
ಈ ಸಂದರ್ಭದಲ್ಲಿ ನಟಿಗೆ ಜ್ಯೂಸಿನಲ್ಲಿ ಮತ್ತು ಬರುವ ಮಾತ್ರೆ ಹಾಕಿದ್ದಾನೆ.. ಅದನ್ನು ಕುಡಿದ ನಟಿ ಪ್ರಜ್ಞೆ ತಪ್ಪಿದ್ದು, ಬಳಿಕ ಅತ್ಯಾಚಾರ ಎಸಗಿದ್ದಾನೆ. ಮರುದಿನ ಬೆಳಗ್ಗೆ ನಟಿಗೆ ನಿನ್ನನ್ನು ಅತ್ಯಾಚಾರ ಮಾಡಿರುವುದಾಗಿ ಆರೋಪಿ ಮೋಹಿತ್ ತಿಳಿಸಿ ಬೆದರಿಕೆ ಹಾಕಿದ್ದಾನೆ.
ಆರೋಪಿ ಮೋಹಿತ್, ಮೊಬೈಲ್ನ್ಲ್ಲಿ ಎಲ್ಲಾವೂ ರೆಕಾರ್ಡ್ ಆಗಿದೆ. ನಾನು ಹೇಳಿದಂತೆ ಕೇಳಬೇಕು ಎಂದು ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲದೇ ಮೊಬೈಲ್ ತೋರಿಸಿ ಮತ್ತೆ ಅತ್ಯಾಚಾರ ಮಾಡಿದ್ದಾನೆ. ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ವಿಡಿಯೋವನ್ನು ಯೂಟ್ಯೂಬ್ಗೆ್ ಹಾಕುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ಇದೇ ರೀತಿ ಬೆದರಿಕೆ ಹಾಕಿ ಸುಮಾರು ರೂ. 20 ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದಾನೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಕುರಿತು ಜೆ.ಜೆ. ನಗರ ಪೊಲೀಸ್ ಠಾಣೆಯಲ್ಲಿ ನಟಿ ದೂರು ದಾಖಲಿಸಿದ್ದಾರೆ. ನಟಿ ದೂರು ನೀಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಅಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರದ 5000 ಸಿಗುವುದು ಯಾವಾಗ..?

ರಾಜ್ಯ ಸರ್ಕಾರ ಅಟೋ,ಟ್ಯಾಕ್ಸಿ ಚಾಲಕರಿಗೆ 5000 ಸಹಾಯ ಧನ ಘೋಷಣೆ ಆಗಿ 15 ದಿನಗಳು ಆಗುತ್ತಾ ಬಂದರೂ ಸರ್ಕಾರ ಮಾತ್ರ ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿರಲಿಲ್ಲ. ಇದೀಗ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ, ಆದರೆ….

ಸಿಂದಗಿ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ  ಶಾಂತಿ ಸಭೆ

ಉತ್ತರಪ್ರಭ ಸಿಂದಗಿ: ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ  ಶಾಂತಿ ಸಭೆ ಮಾಡಲಾಯಿತು ಸಭೆಯಲ್ಲಿ ಸಿಂದಗಿ…

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.