ಬೆಂಗಳೂರು : ಮತ್ತು ಬರುವ ಔಷಧಿ ಕುಡಿಸಿ ನಟಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.
ಮೋಹಿತ್ ಎಂಬ ವ್ಯಕ್ತಿಯಿಂದಲೇ ಈ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ. ಈ ವ್ಯಕ್ತಿ ಖಾಸಗಿ ಕಂಪನಿಯಲ್ಲಿ ಸಿಇಒ ಆಗಿ ಕೆಲಸ ಮಾಡುತ್ತಿದ್ದು, ಅತ್ಯಾಚಾರ ಎಸಗಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ.
ಮೋಹಿತ್ ಮತ್ತು ನಟಿ ಕಳೆದ ವರ್ಷ ರೆಸ್ಟೋರೆಂಟ್ನ ಲ್ಲಿ ಪರಿಚಯವಾಗಿದ್ದರು. ಆರೋಪಿ ಮೋಹಿತ್ ತನ್ನ ಕಂಪನಿ ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ ನಟಿಯನ್ನು ಪರಿಚಯ ಮಾಡಿಕೊಂಡಿದ್ದ. ಪರಿಚಯ ಸ್ನೇಹವಾಗಿ ಮೋಹಿತ್ ನಟಿಯ ಜೊತೆ ಸಲುಗೆ ಬೆಳೆಸಿದ್ದ. ನಂತರ ಆರೋಪಿ ಮೋಹಿತ್ ನಟಿಯ ಹುಟ್ಟು ಹಬ್ಬವನ್ನು ತನ್ನ ಮನೆಯಲ್ಲಿಯೇ ಆಯೋಜಿಸಿದ್ದ.
ಈ ಸಂದರ್ಭದಲ್ಲಿ ನಟಿಗೆ ಜ್ಯೂಸಿನಲ್ಲಿ ಮತ್ತು ಬರುವ ಮಾತ್ರೆ ಹಾಕಿದ್ದಾನೆ.. ಅದನ್ನು ಕುಡಿದ ನಟಿ ಪ್ರಜ್ಞೆ ತಪ್ಪಿದ್ದು, ಬಳಿಕ ಅತ್ಯಾಚಾರ ಎಸಗಿದ್ದಾನೆ. ಮರುದಿನ ಬೆಳಗ್ಗೆ ನಟಿಗೆ ನಿನ್ನನ್ನು ಅತ್ಯಾಚಾರ ಮಾಡಿರುವುದಾಗಿ ಆರೋಪಿ ಮೋಹಿತ್ ತಿಳಿಸಿ ಬೆದರಿಕೆ ಹಾಕಿದ್ದಾನೆ.
ಆರೋಪಿ ಮೋಹಿತ್, ಮೊಬೈಲ್ನ್ಲ್ಲಿ ಎಲ್ಲಾವೂ ರೆಕಾರ್ಡ್ ಆಗಿದೆ. ನಾನು ಹೇಳಿದಂತೆ ಕೇಳಬೇಕು ಎಂದು ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲದೇ ಮೊಬೈಲ್ ತೋರಿಸಿ ಮತ್ತೆ ಅತ್ಯಾಚಾರ ಮಾಡಿದ್ದಾನೆ. ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ವಿಡಿಯೋವನ್ನು ಯೂಟ್ಯೂಬ್ಗೆ್ ಹಾಕುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ಇದೇ ರೀತಿ ಬೆದರಿಕೆ ಹಾಕಿ ಸುಮಾರು ರೂ. 20 ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದಾನೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಕುರಿತು ಜೆ.ಜೆ. ನಗರ ಪೊಲೀಸ್ ಠಾಣೆಯಲ್ಲಿ ನಟಿ ದೂರು ದಾಖಲಿಸಿದ್ದಾರೆ. ನಟಿ ದೂರು ನೀಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಶ್ಚಿಮ ಬಂಗಾಳದ ಹೌರಾ ಘಟನೆಗೆ ಪವನ್ ಮೇಟಿ ಖಂಡನೆ

ಪಶ್ಚಿಮ ಬಂಗಾಳ ರಾಜ್ಯವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಬಹುದು ಎಂಬ ದೃಷ್ಟಿಯಿಂದ ಹೌರಾ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವನ್ ಮೇಟಿ ಆಗ್ರಹಿಸಿದ್ದಾರೆ.

ಶಾಲೆಗಳಿಗೆ ತಹಶಿಲ್ದಾರ ಸತೀಶ್ ಕೂಡಲಗಿ ಭೇಟಿ- ಕಾನೂನು ಸುವ್ಯವಸ್ಥೆ ಪರಿಶೀಲನೆ ಖುಷಿಯಿಂದ ಶಾಲೆಗೆ ಮರಳಿದ ಮಕ್ಕಳು

ಚಿತ್ರ ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಜಾಬ್- ಕೇಸರಿ ಜಟಾಪಟಿ ವಿವಾದದಿಂದ ಆತಂಕ ಸೃಷ್ಟಿಯಾಗಿ…

ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ದಾಳಿ ಮಾಡಿದ ಘಟನೆ ನಡೆದಿದೆ.

ಕಟ್ಟಿಗೆ ಅಡ್ಡೆಗಳಿಗೆ ನೀಡಿದ ಮೂರು ದಿನದ ಗಡವು ಮುಗಿದು ಆರು ತಿಂಗಳಾದರೂ ತಹಶೀಲ್ದಾರರು ಮಾತ್ರ ಮೌನ!

ಆಡಳಿತ ಯಂತ್ರ ಕಾನೂನಿನ ಚೌಕಟ್ಟಿನಲ್ಲಿಯೇ ಕೆಲಸ ಮಾಡಬೇಕು. ಹಾಗಂತ ನಂಬಿಕೆ ಜನಸಾಮಾನ್ಯರಲ್ಲೂ ಇದೆ. ಆದರೆ ಶಿರಹಟ್ಟಿ ಆಡಳಿತ ಯಂತ್ರದ ಮೊಂಡುತನ ನೋಡಿದರೆ ಎಂಥವರಿಗೆ ಬೇಸರ ತರಿಸುತ್ತದೆ. ಶಿರಹಟ್ಟಿ ಇದು ತಾಲೂಕು ಕೇಂದ್ರವೋ ಅಥವಾ ಜಿಲ್ಲಾ ಕೇಂದ್ರವೋ ಎನ್ನುವ ಅನುಮಾನ ಮೂಡುವುದಂತೂ ಸತ್ಯ.