ಸದ್ಯ ವಿಶ್ವವನ್ನು ಕೊರೊನಾ ಮಹಾಮಾರಿ ಬೆನ್ನಟ್ಟಿ ಕಾಡುತ್ತಿದೆ. ಒಂದು ಸೀನು ಕಂಡರೂ ಜನ ಭಯದಿಂದ ದೂರ ಓಡುತ್ತಾರೆ. ಸದ್ಯ ಮಳೆಗಾಲ ಆವರಿಸಿದೆ. ಇದರಿಂದಾಗಿ ಎಲ್ಲೆಡೆ ತಂಪು. ಇದು ಸಾಮಾನ್ಯ. ಸಾಕಷ್ಟು ಜನರಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಬರುತ್ತಲೇ ಇರುತ್ತದೆ. ಹೀಗಾಗಿ ಸೀನಿದ ಕೂಡಲೇ ಕೊರೋನಾ ಇದೆ ಎಂದು ಭಯಪಡಬಾರದು.

ಚಳಿಗಾಲದಲ್ಲಿ ಡೆಂಗ್ಯೂ ಜ್ವರ ಬರುವುದು, ವೈರಲ್ ಫೀವರ್ ಬರುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಕೊರೊನಾ ಹಾಗೂ ಈ ಜ್ವರಗಳ ನಡುವಿನ ವ್ಯತ್ಯಾಸಗಳನ್ನು ಕಂಡು ಹಿಡಿಯುವುದು ಕಷ್ಟಕರ ಎಂದು ವೈದ್ಯರು ಹೇಳುತ್ತಾರೆ.
ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಇಂತಹ ಸಂದರ್ಭದಲ್ಲಿ ನ್ಯೂಮೋನಿಯಾ, ಅತೀವ್ರ ಜ್ವರ, ಡೆಂಗ್ಯೂ ಆರಂಭವಾಗುತ್ತದೆ. ಹೀಗಾಗಿ ಜನರು ಹೆಚ್ಚು ಜಾಗ್ರತೆ ವಹಿಸಬೇಕು. ಯಾವುದೇ ರೀತಿಯ ಜ್ವರ ಬಂದರೂ, ಶೀತ, ನೆಗಡಿ ಬಂದರೂ ಕೂಡಲೇ ವೈದ್ಯರನ್ನು ಕಾಣುವುದು ಉತ್ತಮ.

ಭಾರತದಲ್ಲಿ ಬಾಲ್ಯದ ಮಕ್ಕಳಿಗೆ ನೀಡುವ ಲಸಿಕೆಗಳಿಗೆ ಹೋಲಿಕೆ ಮಾಡಿದರೆ ವಯಸ್ಕರಿಗೆ ನೀಡುವ ಲಸಿಕೆಗಳು ಪ್ರಾಮುಖ್ಯತೆ ಪಡೆದುಕೊಂಡಿಲ್ಲ. ಸಕ್ಕರೆ ಕಾಯಿಲೆ, ಹೃದಯರಕ್ತನಾಳದ ಕಾಯಿಲೆಗಳು (ಸಿವಿಡಿಗಳು), ಆಸ್ತಮಾ ಮತ್ತು ದೀರ್ಘಕಾಲದ ರೋಗಗಳು (ಸಿಒಪಿಡಿ) ನಂತಹ ಕೊಮೊರ್ಬಿಡಿಟಿ ಹೊಂದಿರುವ ವ್ಯಕ್ತಿಗಳು ಶೀತಜ್ವರ ಮತ್ತು ಕೊರೊನಾ ವೈರಸ್ ಗೆ ಹೆಚ್ಚು ಒಳಗಾಗುತ್ತಾರೆ. ಹೀಗಾಗಿ ಅವರು ಆರೋಗ್ಯದಿಂದ ಉಳಿಯುವ ಪ್ರಯತ್ನ ಹಾಗೂ ಜಾಗೃತಿ ವಹಿಸಬೇಕು ಎಂದು ವೈದ್ಯರು ಹೇಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕಿತ ಮಹಿಳೆ ಸಾವು

ಕೊರೋನಾ ಸೋಂಕಿತ ಮಹಿಳೆ ಸಾವುವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ…

ಬ್ಲ್ಯಾಕ್ ಫಂಗಸ್ ಕಣ್ಣಿಗೆ ತಲುಪಿದರೆ ಕಣ್ಣು ತೆಗೆಯಲೇ ಬೇಕಾಗುತ್ತಂತೆ!

ಬೆಂಗಳೂರು: ಬ್ಲಾಕ್ ಫಂಗಸ್ ಕಣ್ಣಿಗೆ ತಲುಪಿದ ಮೇಲೆ ಕಣ್ಣು ತೆಗೆಯಲೇ ಬೇಕಾಗುತ್ತದೆ. ಅದು ಮಿದುಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೊದಲು ಡೆಂಟಲ್ ಪರೀಕ್ಷೆ ಮಾಡುತ್ತಾರೆ. ಬಳಿಕ ಕಣ್ಣಿನ ತಜ್ಞರು ಎಲ್ಲಾ ಸೇರಿ ಪರೀಕ್ಷೆ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಮೆದುಳು ಜ್ವರ ಲಸಿಕಾಕರಣದ ಅಭಿಯಾನ ಯಶಸ್ವಿಗೊಳಿಸಿ:ಜಿಲ್ಲಾಧಿಕಾರಿ ವೈಶಾಲಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯಾದ್ಯಂತ ಡಿಸೆಂಬರ್ 5 ರಿಂದ 24 ರವರೆಗೆ ಮೆದುಳು ಜ್ವರ ಲಸಿಕಾಕರಣವನ್ನು…

ಗದಗನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 5ಕ್ಕೆ

ಗದಗ ನಗರದಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಕಲ ಜಿಲ್ಲೆಯಲ್ಲಿ 5 ಪಾಸಿಟಿವ್ ಕೇಸ್ ದೃಢಪಟ್ಟಂತಾಗಿದೆ.