ಸದ್ಯ ವಿಶ್ವವನ್ನು ಕೊರೊನಾ ಮಹಾಮಾರಿ ಬೆನ್ನಟ್ಟಿ ಕಾಡುತ್ತಿದೆ. ಒಂದು ಸೀನು ಕಂಡರೂ ಜನ ಭಯದಿಂದ ದೂರ ಓಡುತ್ತಾರೆ. ಸದ್ಯ ಮಳೆಗಾಲ ಆವರಿಸಿದೆ. ಇದರಿಂದಾಗಿ ಎಲ್ಲೆಡೆ ತಂಪು. ಇದು ಸಾಮಾನ್ಯ. ಸಾಕಷ್ಟು ಜನರಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಬರುತ್ತಲೇ ಇರುತ್ತದೆ. ಹೀಗಾಗಿ ಸೀನಿದ ಕೂಡಲೇ ಕೊರೋನಾ ಇದೆ ಎಂದು ಭಯಪಡಬಾರದು.

ಚಳಿಗಾಲದಲ್ಲಿ ಡೆಂಗ್ಯೂ ಜ್ವರ ಬರುವುದು, ವೈರಲ್ ಫೀವರ್ ಬರುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಕೊರೊನಾ ಹಾಗೂ ಈ ಜ್ವರಗಳ ನಡುವಿನ ವ್ಯತ್ಯಾಸಗಳನ್ನು ಕಂಡು ಹಿಡಿಯುವುದು ಕಷ್ಟಕರ ಎಂದು ವೈದ್ಯರು ಹೇಳುತ್ತಾರೆ.
ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಇಂತಹ ಸಂದರ್ಭದಲ್ಲಿ ನ್ಯೂಮೋನಿಯಾ, ಅತೀವ್ರ ಜ್ವರ, ಡೆಂಗ್ಯೂ ಆರಂಭವಾಗುತ್ತದೆ. ಹೀಗಾಗಿ ಜನರು ಹೆಚ್ಚು ಜಾಗ್ರತೆ ವಹಿಸಬೇಕು. ಯಾವುದೇ ರೀತಿಯ ಜ್ವರ ಬಂದರೂ, ಶೀತ, ನೆಗಡಿ ಬಂದರೂ ಕೂಡಲೇ ವೈದ್ಯರನ್ನು ಕಾಣುವುದು ಉತ್ತಮ.

ಭಾರತದಲ್ಲಿ ಬಾಲ್ಯದ ಮಕ್ಕಳಿಗೆ ನೀಡುವ ಲಸಿಕೆಗಳಿಗೆ ಹೋಲಿಕೆ ಮಾಡಿದರೆ ವಯಸ್ಕರಿಗೆ ನೀಡುವ ಲಸಿಕೆಗಳು ಪ್ರಾಮುಖ್ಯತೆ ಪಡೆದುಕೊಂಡಿಲ್ಲ. ಸಕ್ಕರೆ ಕಾಯಿಲೆ, ಹೃದಯರಕ್ತನಾಳದ ಕಾಯಿಲೆಗಳು (ಸಿವಿಡಿಗಳು), ಆಸ್ತಮಾ ಮತ್ತು ದೀರ್ಘಕಾಲದ ರೋಗಗಳು (ಸಿಒಪಿಡಿ) ನಂತಹ ಕೊಮೊರ್ಬಿಡಿಟಿ ಹೊಂದಿರುವ ವ್ಯಕ್ತಿಗಳು ಶೀತಜ್ವರ ಮತ್ತು ಕೊರೊನಾ ವೈರಸ್ ಗೆ ಹೆಚ್ಚು ಒಳಗಾಗುತ್ತಾರೆ. ಹೀಗಾಗಿ ಅವರು ಆರೋಗ್ಯದಿಂದ ಉಳಿಯುವ ಪ್ರಯತ್ನ ಹಾಗೂ ಜಾಗೃತಿ ವಹಿಸಬೇಕು ಎಂದು ವೈದ್ಯರು ಹೇಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ಮದುವೆಗೆ ಅಡ್ಡಿಯಾಗು ಆತಂಕದಿಂದ ಸೋಂಕು ಬಚ್ಚಿಟ್ಟ ವ್ಯಕ್ತಿ ಸಾವು

ಕಾರವಾರ : ಮದುವೆಗೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕೆ ಕೊರೊನಾ ಸೋಂಕು ಇರುವುದನ್ನು ಮುಚ್ಚಿಟ್ಟ ವ್ಯಕ್ತಿ ಸದ್ಯ…

ಕೊರೊನಾ ಪಿಪಿಇ ಕಿಟ್ ನದಿಯಲ್ಲಿ ಪತ್ತೆ: ಗ್ರಾಮಸ್ಥರ ಆತಂಕ

ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.