ನವದೆಹಲಿ: ಒಂದೇ ದಿನ ದೇಶದಲ್ಲಿ 24,248 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ, ಮಹಾಮಾರಿಗೆ 425 ಜನರು ಬಲಿಯಾಗಿದ್ದಾರೆ ಎಂದು ಸೋಮವಾರ ಮಧ್ಯಾಹ್ನ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ.

ದೇಶದಲ್ಲಿ 6,97,413 ಪ್ರಕರಣಗಳಲ್ಲಿ 2,53,287 ಪ್ರಕರಣಗಳು ಸಕ್ರೀಯವಾಗಿವೆ. ದೇಶದಲ್ಲಿ ಇದುವರೆಗೂ ಕೊರೊನಾದಿಂದ 19,693 ಜನ ಸಾವನ್ನಪ್ಪಿದ್ದಾರೆ.

ಪ್ರಪಂಚದಲ್ಲಿ 5 ಲಕ್ಷಕ್ಕೂ ಹೆಚ್ಚು ಜನರು ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೆ 1ಕೋಟಿ ಕೊರೊನಾ ಪರೀಕ್ಷೆ ನಡೆದಿದ್ದು, ಇದು ದೇಶದ ಜನಸಂಖ್ಯೆಗೆ ಹೋಲಿಸಿದರೆ ಕೇವಲ ಶೇ.007 ಮಾತ್ರ. ಅಂದರೆ ಪ್ರತಿ ನೂರು ವ್ಯಕ್ತಿಗಳಿಗೆ ಒಂದಕ್ಕಿಂತ ಕಡಿಮೆ ಪರೀಕ್ಷೆ. ಭಾನುವಾರ ಒಂದೇ ದಿನ 1,80,596 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶ್ವದಲ್ಲಿ ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನ ತಲುಪಿದೆ. ಅಮೆರಿಕ ಮತ್ತು ಬ್ರೆಜಿಲ್ ಮೊದಲೆರಡು ಸ್ಥಾನಗಳಲ್ಲಿವೆ. ಅಮೆರಿಕಾದಲ್ಲಿ 29,82,928, ಬ್ರೆಜಿಲ್ ನಲ್ಲಿ 16,04,585 ಮಂದಿಗೆ ಕೊರೊನಾ ಸೋಂಕು ತಗುಲಿದೆ. ರಷ್ಯಾ, ಪೆರು, ಸ್ಪೇನ್ ಕ್ರಮವಾಗಿ 4, 5 ಮತ್ತು 6ನೇ ಸ್ಥಾನದಲ್ಲಿವೆ. ಇನ್ನೂ ಚೀನಾ 22ನೇ ಸ್ಥಾನದಲ್ಲಿದೆ.

Leave a Reply

Your email address will not be published. Required fields are marked *

You May Also Like

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4320 ಕ್ಕೆ ಏರಿಕೆಯಾದಂತಾಗಿದೆ.

ಗ್ರಾಮೀಣ ಭಾಗಕ್ಕೂ ಬಂದೇ ಬಿಟ್ಟಿತು ಕೊರೊನಾ!

ಬೆಳಗಾವಿ: ಇಲ್ಲಿಯವರೆಗೂ ನಗರ ಪ್ರದೇಶದ ಜನರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಮಹಾಮಾರಿ ಸದ್ಯ ಹಳ್ಳಿಗರ ನಿದ್ದೆಗೆಡಿಸಿದೆ.…

ಗಾಂಧಿ ಕುಟುಂಬದ 3 ಟ್ರಸ್ಟ್ ವ್ಯವಹಾರ ತನಿಖೆಗೆ ಆದೇಶಿಸಿದ ಕೇಂದ್ರ ಸರಕಾರ

ನವದೆಹಲಿ: ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಮೂರು ಟ್ರಸ್ಟ್ ವ್ಯವಹಾರಗಳ ಕುರಿತು ತನಿಖೆಗೆ ಕೇಂದ್ರ ಗೃಹ ಇಲಾಖೆ ಬುಧವಾರ ತನಿಖೆಗೆ ಆದೇಶಿಸಿದೆ.