ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ವಿರುದ್ಧ ದುರುದ್ದೇಶಪೂರ್ವಕವಾಗಿ ತಿರುಚಿದ ಫೋಟೋಗಳನ್ನು ಜಗ್ಗೇಶ್ ಮತ್ತು ಬಿಜೆಪಿಗರು ಪೋಸ್ಟ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟ ನಾಗರಿಕರು ಬಿಜೆಪಿಗೆ ಹಿಡಿಶಾಪ ಹಾಕಿದ ದೃಶ್ಯ ಕಂಡುಬಂದಿತ್ತು. ಈ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಕೂಡ ಆಗಿತ್ತು. ಈ ವಿಡಿಯೋದಲ್ಲಿದ್ದ ವ್ಯಕ್ತಿ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಎಂದು ಬಿಜೆಪಿ ಬೆಂಬಲಿಗರು ಫೋಟೋವನ್ನು ಹಂಚಿಕೊಂಡಿದ್ದರು.

ಚಿತ್ರನಟ, ಮಾಜಿ ಕಾಂಗ್ರೆಸ್ಸಿಗ, ಮಾಜಿ ಶಾಸಕ, ಸದ್ಯಕ್ಕೆ ಬಿಜೆಪಿಯಲ್ಲಿರುವ ಜಗ್ಗೇಶ್ ಕೂಡ ಈ ಫೋಟೋವನ್ನು ಟ್ವೀಟ್ ಮಾಡಿ, “ಮೊನ್ನೆ ಊರು ಬಿಟ್ಟು ಹೋಗುವವನು ನನಗೆ ಪಟ್ಟಣ ಹಾಗು ಭಾಜಪ ಸರ್ಕಾರ ಸಹವಾಸ ಸಾಕು ಊರಿಗೆ ಹೋಗಿ ಜಮೀನಿನಲ್ಲಿ ಜೀವನಮಾಡುವೆ ಎಂದು ಬಿಟ್ಟ! ಅದು viral ಆಯಿತು! ಈಗ ನೋಡಿದರೆ ಈತ well planed! ಅನ್ಯ ಪಕ್ಷದ ಕಾರ್ಯಕರ್ತ! ಆದರು ಸಹೋದರ ಎಷ್ಟೆ ಯತ್ನಿಸಿದರು @narendramodi @BJP4India @BJP4Karnataka ಜನರ ಮನಸ್ಸಲ್ಲಿ ಜಾಗಪಡೆದಿದೆ! ಜೈಹಿಂದ್!” ಎಂದು ಟ್ವೀಟ್ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸಂದೀಪ್ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಜೊತೆಗೆ ತಕ್ಷಣ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದೂರು ದಾಖಲಿಸುತ್ತೇವೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲ ಕೂಡ ಇದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

You May Also Like

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.

ಅಕ್ಕಿಗುಂದದಲ್ಲಿ ನೀರಿಗಾಗಿ ಹಾಹಾಕಾರ : ಕುಡಿಯುವ ನೀರಿನ ಕೊಳವೆ ಬಾವಿಯಲ್ಲಿ ಚರಂಡಿ ನೀರು!

ಲಕ್ಷ್ಮೇಶ್ವರ: ತಾಲೂಕಿನ ಅಕ್ಕಿಗುಂದ ಗ್ರಾಮದಲ್ಲಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರು ಗ್ರಾಮ ವಾಸ್ತವ್ಯ ಮಾಡಿದರು. ಈ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆ ಹರಿದಿಲ್ಲ. ಚರಂಡಿಯ ಪಕ್ಕದಲ್ಲಿರುವ ಕುಡಿಯುವ ನೀರಿನ ಕೊಳವೆ ಬಾವಿಯಲ್ಲಿ ಚರಂಡಿ ನೀರು ಈ ಕೊಳವೆ ಬಾವಿಯಲ್ಲಿಯೇ ಹೋಗುವುದರಿಂದ ಗ್ರಾಮಸ್ಥರು ಗ್ರಾಮ ವ್ಯಾಸ್ಥವ್ಯ ಮಾಡಿದಾಗ ತಹಶಿಲ್ದಾರರಿಗೆ ದೊರು ನೀಡಿದರು ಪ್ರಯೋಜನೆ ಆಗಿಲ್ಲ ಈಗ ಈ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

25ನೇ ವಾರ್ಡಿನ ಮಾನವಿ ಮತ್ತು 8ನೇ ವಾರ್ಡ ಕಾಂಗ್ರೆಸ್ ಅಭ್ಯರ್ಥಿ ಪೂರ್ಣಿಮಾ ಮತ್ತು 13ಮತ್ತು 19ನೇ ವಾರ್ಡ ಬಿಜೆಪಿ ಗೆ ಜಯ

ಗದಗ:: ಗದಗ ಬೆಟಗೇರಿ ನಗರ ಸಭೆ ಚುನಾವಣೆ ಮತ ಎಣಿಕೆ ಗದಗ ನಗರದ ಗುರು ಬಸವ…

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.