ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಕೇವಲ‌ ತಂದೆ-ತಾಯಿಗಳೊಂದಿಗೆ ತೆರಳಿ‌ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಯಾರಾದ್ರೂ ಮೃತಪಟ್ಟರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ನಂತರ ಅಂತಿಮ‌ ಸಂಸ್ಕಾರ ನಡೆಸಲು ಸೂಚಿಸಿದ್ದು, 20ಜನರ ಭಾಗವಹಿಸಲು ಮಾತ್ರ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಜಂಟಿ ತಿಳಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಮಖಂಡಿ ಉಪವಿಭಾಗದ ತೇರದಾಳ, ಮುಧೋಳ, ರಬಕವಿ-ಬನಹಟ್ಟಿಯ ಸರ್ಕಾರಿ, ಖಾಸಗಿ ಆಸ್ಪತ್ರೆಗಳನ್ನು ಸಿದ್ಧತೆಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ. ತುರ್ತು‌ ಸಂದರ್ಭದಲ್ಲಿ ಸರ್ಕಾರಿ ಹಾಸ್ಟೆಲ್ ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿಯೂ ಪರಿವರ್ತನೆ ಮಾಡಲು ತೀರ್ಮಾನಿಸಿದ್ದು ಕೋವಿಡ್ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿದಂತೆ 60 ಎಫ್ ಐಆರ್ ದಾಖಲಾಗಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂದಿನ ವಿಧಾನಸಭೆಗೆ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳೇ ಮೆಟ್ಟಿಲು ಎಂದು ಕರೆ ನೀಡಿರುವ ಬಿಜೆಪಿ!

ಮಂಗಳೂರು : ಬಿಜೆಪಿಯು ಮುಂಬರುವ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ಪಕ್ಷ ಸಂಘಟನೆಗೆ ಈಗಿನಿಂದಲೇ ಮುಂದಾಗಿದೆ.

ಕೊಪ್ಪಳದಲ್ಲೂ ಕೊರೋನಾ ಸಪ್ಪಳ: ಮೂರು ಪಾಸಿಟಿವ್ ದೃಢ

ಕೊಪ್ಪಳ: ಈವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲದೇ ಕೊಪ್ಪಳ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಆದರೆ ಇದೀಗ…

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಕಪ್ಪತ್ತಗುಡ್ಡ ಸಂರಕ್ಷಣೆಗೆ ಸ್ವಾಮೀಜಿಗಳ ನೇತೃತ್ವದಲ್ಲಿ ಜನಾಂದೋಲನವೇ ಪರಿಹಾರ : ಜಾರಕಿಹೊಳಿ

ಕಪ್ಪತ್ತಗುಡ್ಡ ರಕ್ಷಣೆ ಮಾಡುವ ವಿಚಾರದಲ್ಲಿ ನಮ್ಮ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಆದರೆ ಈಗೀನ ಬಿ.ಎಸ್.ವೈ ಸರ್ಕಾರ ಗಣಿಗಾರಿಕೆ ಮುಕ್ತ ಮಾಡುವಲ್ಲಿ ಬಹುತೇಕ ಕೆಲಸ ಮುಗಿಸಿದೆ.