ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಕೇವಲ‌ ತಂದೆ-ತಾಯಿಗಳೊಂದಿಗೆ ತೆರಳಿ‌ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಯಾರಾದ್ರೂ ಮೃತಪಟ್ಟರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ನಂತರ ಅಂತಿಮ‌ ಸಂಸ್ಕಾರ ನಡೆಸಲು ಸೂಚಿಸಿದ್ದು, 20ಜನರ ಭಾಗವಹಿಸಲು ಮಾತ್ರ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಜಂಟಿ ತಿಳಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಮಖಂಡಿ ಉಪವಿಭಾಗದ ತೇರದಾಳ, ಮುಧೋಳ, ರಬಕವಿ-ಬನಹಟ್ಟಿಯ ಸರ್ಕಾರಿ, ಖಾಸಗಿ ಆಸ್ಪತ್ರೆಗಳನ್ನು ಸಿದ್ಧತೆಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ. ತುರ್ತು‌ ಸಂದರ್ಭದಲ್ಲಿ ಸರ್ಕಾರಿ ಹಾಸ್ಟೆಲ್ ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿಯೂ ಪರಿವರ್ತನೆ ಮಾಡಲು ತೀರ್ಮಾನಿಸಿದ್ದು ಕೋವಿಡ್ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿದಂತೆ 60 ಎಫ್ ಐಆರ್ ದಾಖಲಾಗಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಉತ್ತರ ಕರ್ನಾಟಕಕ್ಕೆ ಪ್ರತಿಯೊಂದು ರಂಗದಲ್ಲಿಯೂ ಅನ್ಯಾಯವಾಗುತ್ತಿದೆ – ಹೊರಟ್ಟಿ!

ಬೆಂಗಳೂರು : ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಸಚಿವ ಸುಧಾಕರ್ ನೀಡಿದ ಮಾಹಿತಿ

ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.

ಎಸ್.ಎಸ್‌.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳು ಇಚ್ಛಿಸಿದ ಕೇಂದ್ರದಲ್ಲಿ ಪರೀಕ್ಷೆಗೆ ಅವಕಾಶ

ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…