ಮದುವೆ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳು ನಿಷೇಧಿಸಿದ ಜಿಲ್ಲಾಡಳಿತ

ಬಾಗಲಕೋಟೆ:ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಮದುವೆ ತುರ್ತು ನಡೆಸಲೇ ಬೇಕಿದ್ದರೆ ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ಕೇವಲ‌ ತಂದೆ-ತಾಯಿಗಳೊಂದಿಗೆ ತೆರಳಿ‌ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಯಾರಾದ್ರೂ ಮೃತಪಟ್ಟರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ನಂತರ ಅಂತಿಮ‌ ಸಂಸ್ಕಾರ ನಡೆಸಲು ಸೂಚಿಸಿದ್ದು, 20ಜನರ ಭಾಗವಹಿಸಲು ಮಾತ್ರ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಎಸ್ಪಿ ಲೋಕೇಶ್ ಜಗಲಾಸರ್ ಜಂಟಿ ತಿಳಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಮಖಂಡಿ ಉಪವಿಭಾಗದ ತೇರದಾಳ, ಮುಧೋಳ, ರಬಕವಿ-ಬನಹಟ್ಟಿಯ ಸರ್ಕಾರಿ, ಖಾಸಗಿ ಆಸ್ಪತ್ರೆಗಳನ್ನು ಸಿದ್ಧತೆಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಲಾಗಿದೆ. ತುರ್ತು‌ ಸಂದರ್ಭದಲ್ಲಿ ಸರ್ಕಾರಿ ಹಾಸ್ಟೆಲ್ ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿಯೂ ಪರಿವರ್ತನೆ ಮಾಡಲು ತೀರ್ಮಾನಿಸಿದ್ದು ಕೋವಿಡ್ ನಿಯಮಾವಳಿ ಉಲ್ಲಂಘನೆಗೆ ಸಂಬಂಧಿಸಿದಂತೆ 60 ಎಫ್ ಐಆರ್ ದಾಖಲಾಗಿವೆ ಎಂದು ತಿಳಿಸಿದ್ದಾರೆ.

Exit mobile version