ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,01, 240ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸಾಯಂಕಾಲ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಇದರಲ್ಲಿ 19,693 ಸಾವುಗಳಾಗಿದ್ದು,,4.24 ಲಕ್ಷ ಜನ ಗುಣಮುರಾಗಿದ್ದಾರೆ. 2.5 ಲಕ್ಷ ಸಕ್ರಿಯ ಕೇಸುಗಳಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ 2ರಂದು ಸೋಂಕಿತರ ಸಂಖ್ಯೆ 6 ಲಕ್ಷ ದಾಟಿತ್ತು. ಕೇವಲ ನಾಲ್ಕೇ ದಿನದಲ್ಲಿ (ಜುಲೈ 3-6) ಹೊಸದಾಗಿ 1 ಲಕ್ಷ ಕೇಸುಗಳು ದಾಖಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ದೇಶದಲ್ಲಿ ಮೊದಲ ಪಾಸಿಟಿವ್ ಕೇಸ್ ದಾಖಲಾಗಿದ್ದು ಜನವರಿ 30ರಂದು. ನಂತರ 1 ಲಕ್ಷ ಮುಟ್ಟಲು 110 ದಿನ ಹಿಡಿದಿತ್ತು. ಜೂನ್ 3ರಂದು ಪಾಸಿಟಿವ್ ಸಂಖ್ಯೆ 2 ಲಕ್ಷ ದಾಟಿತ್ತು. ನಂತರ ಹತ್ತೇ ದಿನದಲ್ಲಿ (ಜೂನ್ 13) ಅದು 3 ಲಕ್ಷ ದಾಟಿತ್ತು. ಜೂನ್ 21ರಂದು 4 ಲಕ್ಷ ತಲುಪಿತ್ತು. ನಂತರದ 11 ದಿನದಲ್ಲಿ ಹೊಸದಾಗಿ 2 ಲಕ್ಷ ಕೇಸುಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ಜುಲೈ 2ರಂದು 6 ಲಕ್ಷ ದಾಟಿತ್ತು. ಈಗ ನಾಲ್ಕು ದಿನದಲ್ಲಿ ಮತ್ತೆ 1 ಲಕ್ಷ ಕೇಸು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ಭಾನುವಾರವಷ್ಟೇ ಅತಿ ಹೆಚ್ಚು ಸೋಂಕಿತ ದೇಶಗಳ ಪಟ್ಟಿಯಲ್ಲಿ ಭಾರತ 4ರಿಂದ 3ನೆ ಸ್ಥಾನಕ್ಕೆ ಏರಿತ್ತು. 1 ಮತ್ತು 2ನೆ ಸ್ಥಾನದಲ್ಲಿ ಅಮೆರಿಕ ಮತ್ತು ಬ್ರೆಜಿಲ್ ಇವೆ.

Leave a Reply

Your email address will not be published. Required fields are marked *

You May Also Like

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಜೀವನದಲ್ಲಿ ಒಂದಿಲ್ಲ ಒಂದು ಸಂಕಷ್ಟಗಳು ಇರುತ್ತವೆ. ಸಂಕಷ್ಟ ಎದುರಿಸುವ ಮನೋಬಲ ಬಲಿಷ್ಠವಿದ್ದರೆ ಎಂತಹ ಸಮಸ್ಯೆಯೂ ದೂರ ಮಾಡಬಹುದು ಈ ನಿಟ್ಟಿನಲ್ಲಿ ಸಾಧಕರ ಯಶೋಗಾಥೆಗಳನ್ನು ಅವಲೋಕಿಸಿಕೊಂಡು ಮುನ್ನಡೆಯಿರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರಸಾ ರಾಯಬಾಗಿ ಹೇಳಿದರು.

ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?

ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.

ಸಂಶಯದ ಆಸಾಮಿಯಿಂದ ಪತ್ನಿ, ಮಗನಿಗೆ ಚಾಕು ಇರಿತ

ಉತ್ತರಪ್ರಭ ಸುದ್ದಿ ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ…

ಕೋವಿಡ್-19 ಗದಗ ಜಿಲ್ಲೆ : ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬ0ದ ಪ್ರದೇಶಗಳನ್ನು ಪ್ರತಿಬಂಧಿತÀ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ.