ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,01, 240ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸಾಯಂಕಾಲ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಇದರಲ್ಲಿ 19,693 ಸಾವುಗಳಾಗಿದ್ದು,,4.24 ಲಕ್ಷ ಜನ ಗುಣಮುರಾಗಿದ್ದಾರೆ. 2.5 ಲಕ್ಷ ಸಕ್ರಿಯ ಕೇಸುಗಳಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ 2ರಂದು ಸೋಂಕಿತರ ಸಂಖ್ಯೆ 6 ಲಕ್ಷ ದಾಟಿತ್ತು. ಕೇವಲ ನಾಲ್ಕೇ ದಿನದಲ್ಲಿ (ಜುಲೈ 3-6) ಹೊಸದಾಗಿ 1 ಲಕ್ಷ ಕೇಸುಗಳು ದಾಖಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ದೇಶದಲ್ಲಿ ಮೊದಲ ಪಾಸಿಟಿವ್ ಕೇಸ್ ದಾಖಲಾಗಿದ್ದು ಜನವರಿ 30ರಂದು. ನಂತರ 1 ಲಕ್ಷ ಮುಟ್ಟಲು 110 ದಿನ ಹಿಡಿದಿತ್ತು. ಜೂನ್ 3ರಂದು ಪಾಸಿಟಿವ್ ಸಂಖ್ಯೆ 2 ಲಕ್ಷ ದಾಟಿತ್ತು. ನಂತರ ಹತ್ತೇ ದಿನದಲ್ಲಿ (ಜೂನ್ 13) ಅದು 3 ಲಕ್ಷ ದಾಟಿತ್ತು. ಜೂನ್ 21ರಂದು 4 ಲಕ್ಷ ತಲುಪಿತ್ತು. ನಂತರದ 11 ದಿನದಲ್ಲಿ ಹೊಸದಾಗಿ 2 ಲಕ್ಷ ಕೇಸುಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ಜುಲೈ 2ರಂದು 6 ಲಕ್ಷ ದಾಟಿತ್ತು. ಈಗ ನಾಲ್ಕು ದಿನದಲ್ಲಿ ಮತ್ತೆ 1 ಲಕ್ಷ ಕೇಸು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ಭಾನುವಾರವಷ್ಟೇ ಅತಿ ಹೆಚ್ಚು ಸೋಂಕಿತ ದೇಶಗಳ ಪಟ್ಟಿಯಲ್ಲಿ ಭಾರತ 4ರಿಂದ 3ನೆ ಸ್ಥಾನಕ್ಕೆ ಏರಿತ್ತು. 1 ಮತ್ತು 2ನೆ ಸ್ಥಾನದಲ್ಲಿ ಅಮೆರಿಕ ಮತ್ತು ಬ್ರೆಜಿಲ್ ಇವೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.