ನವದೆಹಲಿ: ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದ ನಡುವಿನ 24 ಗಂಟೆಗಳಲ್ಲಿ 24,448 ಕೇಸುಗಳು ದಾಳಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7,01, 240ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸಾಯಂಕಾಲ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಇದರಲ್ಲಿ 19,693 ಸಾವುಗಳಾಗಿದ್ದು,,4.24 ಲಕ್ಷ ಜನ ಗುಣಮುರಾಗಿದ್ದಾರೆ. 2.5 ಲಕ್ಷ ಸಕ್ರಿಯ ಕೇಸುಗಳಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈ 2ರಂದು ಸೋಂಕಿತರ ಸಂಖ್ಯೆ 6 ಲಕ್ಷ ದಾಟಿತ್ತು. ಕೇವಲ ನಾಲ್ಕೇ ದಿನದಲ್ಲಿ (ಜುಲೈ 3-6) ಹೊಸದಾಗಿ 1 ಲಕ್ಷ ಕೇಸುಗಳು ದಾಖಲಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ದೇಶದಲ್ಲಿ ಮೊದಲ ಪಾಸಿಟಿವ್ ಕೇಸ್ ದಾಖಲಾಗಿದ್ದು ಜನವರಿ 30ರಂದು. ನಂತರ 1 ಲಕ್ಷ ಮುಟ್ಟಲು 110 ದಿನ ಹಿಡಿದಿತ್ತು. ಜೂನ್ 3ರಂದು ಪಾಸಿಟಿವ್ ಸಂಖ್ಯೆ 2 ಲಕ್ಷ ದಾಟಿತ್ತು. ನಂತರ ಹತ್ತೇ ದಿನದಲ್ಲಿ (ಜೂನ್ 13) ಅದು 3 ಲಕ್ಷ ದಾಟಿತ್ತು. ಜೂನ್ 21ರಂದು 4 ಲಕ್ಷ ತಲುಪಿತ್ತು. ನಂತರದ 11 ದಿನದಲ್ಲಿ ಹೊಸದಾಗಿ 2 ಲಕ್ಷ ಕೇಸುಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ಜುಲೈ 2ರಂದು 6 ಲಕ್ಷ ದಾಟಿತ್ತು. ಈಗ ನಾಲ್ಕು ದಿನದಲ್ಲಿ ಮತ್ತೆ 1 ಲಕ್ಷ ಕೇಸು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ಭಾನುವಾರವಷ್ಟೇ ಅತಿ ಹೆಚ್ಚು ಸೋಂಕಿತ ದೇಶಗಳ ಪಟ್ಟಿಯಲ್ಲಿ ಭಾರತ 4ರಿಂದ 3ನೆ ಸ್ಥಾನಕ್ಕೆ ಏರಿತ್ತು. 1 ಮತ್ತು 2ನೆ ಸ್ಥಾನದಲ್ಲಿ ಅಮೆರಿಕ ಮತ್ತು ಬ್ರೆಜಿಲ್ ಇವೆ.

Leave a Reply

Your email address will not be published. Required fields are marked *

You May Also Like

ಕಂಟೆನ್ಮೆಂಟ್ ಜೋನ್ ಹಾಗೂ ಬಫರ್ ವಲಯಗಳ ಬಗ್ಗೆ ಪರಿಷ್ಕೃತ ಮಾರ್ಗಸೂಚಿ

ರಾಜ್ಯದಲ್ಲಿ ಕೋವಿಡ್-19 ವಿಕಸಿಸುತ್ತಿರುವ ಸಂದರ್ಭದಲ್ಲಿ, ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ಅಕ್ಕ-ಪಕ್ಕದಲ್ಲಿರುವ/ಹತ್ತಿರದಲ್ಲಿಯೇ ಇರುವ ಮನೆಗಳು ಅಥವಾ ಅಪಾರ್ಟ್ಮೆಂಟ್/ ವಸತಿ ಸಮುಚ್ಛಯಗಳಲ್ಲಿ ವರದಿಯಾಗುತ್ತಿವೆ. ಇದರಿಂದ ಕಂಟೇನ್ಮೆಂಟ್ ವಲಯಗಳ ಸಂಖ್ಯೆಯು ಮಿತಿ ಮೀರಿದ್ದು, ಪ್ರಾಧಿಕಾರಿಗಳಿಗೆ ಸರ್ವೇಕ್ಷಣಾ ಚಟುವಟಿಕೆಗಳನ್ನು ಸುಲಭವಾಗಿ ಕೈಗೊಳ್ಳಲು ಅಡ್ಡಿಯಾಗುವುದೇ ಅಲ್ಲದೇ, ಪರಿಧಿ ವಲಯ ನಿಯಂತ್ರಣವನ್ನೂ ಸಹ ಖಚಿತಪಡಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.

ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ.

ಜೈಲುವಾಸದಿಂದ ಇಂದು ಶಶಿಕಲಾ ಬಿಡುಗಡೆ

ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.