ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ 30 ವರ್ಷದ ಯುವಕ ಜುಲೈ 5 ರಂದು ಮೃತಪಟ್ಟಿದ್ದಾನೆ.
ಪಕ್ಕದ ರಾಜ್ಯ ಗೋವಾ ದಿಂದ ಜುಲೈ 2 ರಂದು ಸ್ವ ಗ್ರಾಮಕ್ಕೆ ಬಂದಿದ್ದು, ಮೃತಪಟ್ಟಿದ್ದ ಯುವಕ ರಿಪೋರ್ಟ್ ನಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ ಎಂದು ಡಿಎಚ್ಓ ಅನಂತ್ ದೇಸಾಯಿ ತಿಳಿಸಿದ್ದಾರೆ.
ಗ್ರಾಮದಲ್ಲಿ ಮೃತ ಯುವಕನಿಗೆ ಸಂಬಂಧಿಸಿದಂತೆ 40 ಜನರಿಗೆ ಕ್ವಾರಂಟೈನ್ ಮಾಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.