ಬೆಂಗಳೂರು: ಸಂದರ್ಭದ ಬಂಧಿಯಾಗಿ ಆಕೆ 3 ತಿಂಗಳು ಕಾಲ ತವರಲ್ಲೇ ಉಳಿಯಬೇಕಾಯಿತು. ಗಂಡ-ಮಗ ಬೆಂಗಳೂರಿನಲ್ಲಿ, ಆಕೆ ಚಂಡಿಗಢ್ ನಲ್ಲಿ. ಏನ್ ಜಗಳಾಡಿ ಹೋಗಿದ್ದರಾ? ಊಹೂಂ, ಸುಮ್ಮನೇ ವಾರದ ಮಟ್ಟಿಗೆ ಅಂತಾ ಹೋಗಿದ್ದರು.

ಯಾವ ಮುನ್ಸೂಚನೆ ನೀಡದೇ, ಜನರಿಗೆ ತಮ್ಮೂರಿಗೆ ತೆರಳುವ ಅವಕಾಶವನ್ನೂ ನೀಡದೇ ಏಕಾಏಕಿ ರಾತ್ರೋರಾತ್ರಿ ಲಾಕ್ ಡೌನ್ ಘೋಷಣೆಯಾದ ಪರಿಣಾಮ, ಯಾವ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ಆಕೆಗೆ ತವರಿಂದ ಬೆಂಗಳೂರಿಗೆ ಬರಲಾಗಲಿಲ್ಲ.

ಅನ್-ಲಾಕ್ ನಂತರ ಸಂಚಾರ ಶುರುವಾದ ನಂತರ ಬೆಂಗಳೂರಿಗೆ ಬಂದರೆ ಪತಿರಾಯ ಬಾಗಲು ತೆಗೆಯುತ್ತಿಲ್ಲ. ಆಕೆಯ ಪಾಲಿಗೆ ಇದೊಂಥರಾ ಲಾಕ್ ಔಟ್! ನಗರದ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಿದು.

ಮೂರು ತಿಂಗಳು ನಂತರ ಮಗನನ್ನು ನೋಡಲು ಬಂದ ಪತ್ನಿಯನ್ನು ಪತಿ ಮನೆಯ ಹೊರಗೆ ನಿಲ್ಲಿಸಿದ್ದಾನೆ. ಕೊನೆಗೆ ಮಹಿಳೆ ತಾನು 14 ದಿನ ಮನೆಯಲ್ಲಿ ನಿಮ್ಮಿಬ್ಬರಿಂದ ದೂರವಿದ್ದು ಕ್ವಾರಂಟೈನ್ ನಲ್ಲಿರುತ್ತೇನೆ, ಕೋವಿಡ್ ನೆಗೆಟಿವ್ ವರದಿ ಬಂದ ಬಳಿಕ ನಿಮ್ಮೊಂದಿಗೆ ಬೆರೆಯುತ್ತೇನೆ ಎಂದು ಕೇಳಿದರೂ ಪತಿ ಬಾಗಿಲು ತೆರೆದಿಲ್ಲ.

ಮಹಿಳೆ ವರ್ತೂರು ಠಾಣೆಯ ಪೊಲೀಸರನ್ನು ಸಂಪರ್ಕಿಸಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಪೊಲೀಸರು ಫೋನ್ ಮಾಡಿದರೆ, ಪತಿ ರಿಸೀವ್ ಮಾಡಿಲ್ಲ. ಕೊನೆಗೆ ಪೊಲೀಸರು ಬರಬಹುದೆಂದು ತಿಳಿದು ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ. ಪೊಲೀಸರು ಮಹಿಳೆಯನ್ನು ಆಕೆಯ ಸಂಬಂಧಿಕರ ಮನೆಯಲ್ಲಿರಿಸುವ ವ್ಯವಸ್ಥೆ ಮಾಡಿದ್ದಾರೆ.

ಲಾಕ್ ಡೌನ್ ಮತ್ತು ಕೊರೊನಾ ಈ ಎರಡೂ ಮಾಡಿದ ಎಡವಟ್ಟುಗಳು ಲಕ್ಷ ಲಕ್ಷ. ಈ ಪ್ರಕರಣದಲ್ಲಿ ಲಾಕ್ ಡೌನ್ ಮತ್ತು ಕೊರೋನಾ ತಾವು ಮಾತ್ರ ಜೋಡಿಯಾಗಿ, ಪತಿ-ಪತ್ನಿ ನಡುವೆ ಬಿರುಕು ಮೂಡಿಸಿವೆ.

Leave a Reply

Your email address will not be published. Required fields are marked *

You May Also Like

ಜಾನುವಾರುಗಳ ಚಿಕಿತ್ಸೆಗೆ ಮನೆ ಬಾಗಿಲಿಗೆ ಬರಲಿದೆ ವಾಹನ: ಯೋಜನೆ ಬಗ್ಗೆ ಇಲ್ಲಿದೆ ಮಾಹಿತಿ

ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ರೈತರು ಇನ್ನಿಲ್ಲದ ಹರಸಾಹಸ ಪಡಬೇಕಾಗಿತ್ತು. ಆದರೆ ರಾಜ್ಯದಲ್ಲಿ ಇಂದಿನಿಂದ ಪಶುಸಂಜೀವಿನಿ ಯೋಜನೆಯನ್ನು…

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.