ಬೆಂಗಳೂರು: ಕರ್ನಾಟಕವನ್ನು ಇಟಲಿ ಅಥವಾ ನ್ಯೂಯಾರ್ಕ್ ಮಾಡಬೇಡಿ. ರಾಜ್ಯದಲ್ಲಿ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ ಚಿಕಿತ್ಸೆ, ಆಂಬುಲೆನ್ಸ್, ಗೌರವಯುತ ಅಂತ್ಯಸಂಸ್ಕಾರಗಳು ಮಾನವ ಹಕ್ಕುಗಳು. ಜನರ ಅಪೇಕ್ಷೆ, ನಿರೀಕ್ಷೆಗಳನ್ನು ಗಮನದಲ್ಲಿರಿಸಿ ದೃಢ ಹೆಜ್ಜೆಗಳನ್ನಿಡಿ ಎಂದು ಗದಗ ಶಾಸಕ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಕೊವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿರುವುದನ್ನು ಟೀಕಿಸಿರುವ ಅವರು, ಕೊವಿಡ್ ನಿಯಂತ್ರಣ ಮತ್ತು ಚಿಕಿತ್ಸೆಯ ನಿರ್ವಹಣೆ ಕುರಿತು ಹಲವು ಸಲಹೆ ನೀಡಿದ್ದಾರೆ.



ಹಾಸಿಗೆ ಕೊರತೆ, ಅಂಬುಲೆನ್ಸ್ ಅಸಮರ್ಪಕ ಸೇವೆ ಮತ್ತು ಊಟದ ಅವ್ಯವಸ್ಥೆಗಳನ್ನು ಕೂಡಲೇ ಸರಿಪಡಿಸಲು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಎಲ್ಲರಿಗೂ ಕೊವಿಡ್ ವಿಮೆ ಒದಗಿಸಬೇಕು, ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ಸಿಬ್ಬಂದಿ ಕೊರತೆ ತುಂಬಲು ಕೊವಿಡ್ ತುರ್ತು ನೇಮಕಾತಿ ಮಾಡಬೇಕು ಎಂದಿರುವ ಅವರು, ಮಾದರಿಗಳ ಪರೀಕ್ಷೆಯ ಫಲಿತಾಂಶಗಳು ವಿಳಂಬವಾಗದಂತೆ ನಿಗಾ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿರುವ ಅವರು ಇದನ್ನು ಜನರ ಗಮನಕ್ಕೂ ತಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಭಾರತದಲ್ಲಿ ಒಂದೇ ದಿನ ಸೋಂಕು ಕಾಣಿಸಿಕೊಂಡಿದ್ದು ಎಷ್ಟು ಜನರಿಗೆ ಗೊತ್ತಾ?

ಭಾರತದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿರೀಕ್ಷೆ ಮೀರಿ ದಾಖಲಾಗುತ್ತಿದೆ. ಭಾನುವಾರ ಒಂದೇ ದಿನ ದೇಶದಲ್ಲಿ 4,296 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 111 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ನೀರಿನ ಕರ ಹೆಚ್ಚಳಕ್ಕೆ ಕನ್ನಡ ಕ್ರಾಂತಿ ಸೇನೆ ವಿರೋಧ

ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಗದಗ ಜಿಲ್ಲೆಯ ಪಶುವೈದ್ಯರ ಕೊರತೆ ಕುರಿತು ಪರಿಷತ್ತಿನಲ್ಲಿ ಪ್ರತಿಧ್ವನಿ

ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.

ಮಾ.11 ರಿಂದ ದ್ವಾದಶ ಜ್ಯೋತಿರ್ಲಿಂಗ ದರ್ಶನ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಮಾ.11 ರಿಂದ 13ರ ವರೆಗೆ ಸಂಜೆ 4 ರಿಂದ ರಾತ್ರಿ 10ರ ವರೆಗೆ ನಗರದ ಮುನ್ಸಿಪಲ್ ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ದಿನಗಳಲ್ಲಿ ವಿಶ್ವದಲ್ಲಿ ಅವತರಿಸಿದ ವಿಶ್ವೇಶ್ವರನ ದರ್ಶನ, ಸಹಸ್ರಲಿಂಗ ದರ್ಶನ ಮತ್ತು ದ್ವಾದಶ ಜ್ಯೋತಿರ್ಲಿಂಗ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕುಮಾರಿ ಬಿ.ಕೆ.ಜಯಂತಿಅಕ್ಕ ಹೇಳಿದರು.