ಬೆಂಗಳೂರು: ಕರ್ನಾಟಕವನ್ನು ಇಟಲಿ ಅಥವಾ ನ್ಯೂಯಾರ್ಕ್ ಮಾಡಬೇಡಿ. ರಾಜ್ಯದಲ್ಲಿ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ ಚಿಕಿತ್ಸೆ, ಆಂಬುಲೆನ್ಸ್, ಗೌರವಯುತ ಅಂತ್ಯಸಂಸ್ಕಾರಗಳು ಮಾನವ ಹಕ್ಕುಗಳು. ಜನರ ಅಪೇಕ್ಷೆ, ನಿರೀಕ್ಷೆಗಳನ್ನು ಗಮನದಲ್ಲಿರಿಸಿ ದೃಢ ಹೆಜ್ಜೆಗಳನ್ನಿಡಿ ಎಂದು ಗದಗ ಶಾಸಕ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಕೊವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿರುವುದನ್ನು ಟೀಕಿಸಿರುವ ಅವರು, ಕೊವಿಡ್ ನಿಯಂತ್ರಣ ಮತ್ತು ಚಿಕಿತ್ಸೆಯ ನಿರ್ವಹಣೆ ಕುರಿತು ಹಲವು ಸಲಹೆ ನೀಡಿದ್ದಾರೆ.



ಹಾಸಿಗೆ ಕೊರತೆ, ಅಂಬುಲೆನ್ಸ್ ಅಸಮರ್ಪಕ ಸೇವೆ ಮತ್ತು ಊಟದ ಅವ್ಯವಸ್ಥೆಗಳನ್ನು ಕೂಡಲೇ ಸರಿಪಡಿಸಲು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಎಲ್ಲರಿಗೂ ಕೊವಿಡ್ ವಿಮೆ ಒದಗಿಸಬೇಕು, ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ಸಿಬ್ಬಂದಿ ಕೊರತೆ ತುಂಬಲು ಕೊವಿಡ್ ತುರ್ತು ನೇಮಕಾತಿ ಮಾಡಬೇಕು ಎಂದಿರುವ ಅವರು, ಮಾದರಿಗಳ ಪರೀಕ್ಷೆಯ ಫಲಿತಾಂಶಗಳು ವಿಳಂಬವಾಗದಂತೆ ನಿಗಾ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿರುವ ಅವರು ಇದನ್ನು ಜನರ ಗಮನಕ್ಕೂ ತಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಗುತ್ತಿಗೆ ದಾರನಿಂದ ಕಳಪೆ ಕಾಮಗಾರಿ-ಗ್ರಾಮಸ್ಥರ ಆಕ್ರೋಶ

ಲಕ್ಷ್ಮೇಶ್ವರ: ಉತ್ತಮ ರಸ್ತೆ ನಿರ್ಮಾಣಕ್ಕೆಂದು ಸರಕಾರ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತೇ. ಆದ್ರೆ, ಗುತ್ತಿಗೆದಾರರು…

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಅಕ್ರಮ ಮಣ್ಣು ಲೂಟಿ ಆರೋಪ : ಶಾಸಕ ಬಂಡಿ ರಾಜಿನಾಮೆಗೆ ಒತ್ತಾಯ

ಕೆರೆಯ ಗರಸು ಮಣ್ಣನ್ನು ಅಕ್ರಮವಾಗಿ ಲೂಟಿ ಮಾಡಿದ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಮೀಟಿ ವಕ್ತಾರ ಬಿ.ಎಸ್.ಶೀಲವಂತರ ಆಗ್ರಹಿಸಿದ್ದಾರೆ.