ಬೆಂಗಳೂರು: ಕರ್ನಾಟಕವನ್ನು ಇಟಲಿ ಅಥವಾ ನ್ಯೂಯಾರ್ಕ್ ಮಾಡಬೇಡಿ. ರಾಜ್ಯದಲ್ಲಿ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ ಚಿಕಿತ್ಸೆ, ಆಂಬುಲೆನ್ಸ್, ಗೌರವಯುತ ಅಂತ್ಯಸಂಸ್ಕಾರಗಳು ಮಾನವ ಹಕ್ಕುಗಳು. ಜನರ ಅಪೇಕ್ಷೆ, ನಿರೀಕ್ಷೆಗಳನ್ನು ಗಮನದಲ್ಲಿರಿಸಿ ದೃಢ ಹೆಜ್ಜೆಗಳನ್ನಿಡಿ ಎಂದು ಗದಗ ಶಾಸಕ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಕೊವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿರುವುದನ್ನು ಟೀಕಿಸಿರುವ ಅವರು, ಕೊವಿಡ್ ನಿಯಂತ್ರಣ ಮತ್ತು ಚಿಕಿತ್ಸೆಯ ನಿರ್ವಹಣೆ ಕುರಿತು ಹಲವು ಸಲಹೆ ನೀಡಿದ್ದಾರೆ.



ಹಾಸಿಗೆ ಕೊರತೆ, ಅಂಬುಲೆನ್ಸ್ ಅಸಮರ್ಪಕ ಸೇವೆ ಮತ್ತು ಊಟದ ಅವ್ಯವಸ್ಥೆಗಳನ್ನು ಕೂಡಲೇ ಸರಿಪಡಿಸಲು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಎಲ್ಲರಿಗೂ ಕೊವಿಡ್ ವಿಮೆ ಒದಗಿಸಬೇಕು, ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ಸಿಬ್ಬಂದಿ ಕೊರತೆ ತುಂಬಲು ಕೊವಿಡ್ ತುರ್ತು ನೇಮಕಾತಿ ಮಾಡಬೇಕು ಎಂದಿರುವ ಅವರು, ಮಾದರಿಗಳ ಪರೀಕ್ಷೆಯ ಫಲಿತಾಂಶಗಳು ವಿಳಂಬವಾಗದಂತೆ ನಿಗಾ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿರುವ ಅವರು ಇದನ್ನು ಜನರ ಗಮನಕ್ಕೂ ತಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ವೋಟ್ ಹಾಕಿದರೆ ಮಾತ್ರ ಲಸಿಕೆ ಕೊಟ್ಟು ಪ್ರಾಣ ಉಳಿಸುತ್ತೀರಾ? ಎಂದು ಬಿಜೆಪಿಯನ್ನೇ ಪ್ರಶ್ನಿಸಿದ ವಿಶ್ವನಾಥ್!

ಮೈಸೂರು : ವೋಟ್ ಹಾಕಿ ಉಳಿಸಿದರೆ ಮಾತ್ರ ಜನರನ್ನ ಬದುಕಿಸುತ್ತೀರಾ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ಪಕ್ಷದ ನಿರ್ಧಾರವನ್ನೇ ಬಿಜೆಪಿ ಶಾಸಕ ಎಚ್. ವಿಶ್ವನಾಥ್ ಪ್ರಶ್ನಿಸಿದ್ದಾರೆ.

ದಿಶಾ ರವಿ ಪರ ಧ್ವನಿಯೆತ್ತುವ ಅಗತ್ಯವಿದೆ

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಶಾ ರವಿ ಬಂಧನವನ್ನು ಸಾಮಾಜಿಕ ಜಾಲತಾಣದ ಮೂಲಕ ನಟಿ ರಮ್ಯಾ ವಿರೋಧಿಸಿದ್ದಾರೆ. 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಜೈಲಿನಲ್ಲಿದ್ದಾರೆ. ಇದಕ್ಕೆ ನಾವೆಲ್ಲರು ಸಾಮೂಹಿಕವಾಗಿ ಜವಾಬ್ದಾರರಾಗುತ್ತೇವೆ. ಬಹಳ ದಿನಗಳಿಂದ ಇಂತಹ ಅನ್ಯಾಯವನ್ನು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದೇ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಲ್ಲಿಕೆಗೆ ಇರುವ ನಿಯಮಗಳೇನು?

ಬೆಂಗಳೂರು: 2021-22ನೇ ಸಾಲಿನ ಆಯವ್ಯಯದಲ್ಲಿ ಕಾಲೇಜುಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಶೌಚಾಲಯಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕ ಉನ್ನತೀಕರಿಸಲು ಹಾಗೂ ನೀರಿನ ಸಂಪರ್ಕ ಒದಗಿಸಲು ಮುಂದಿನ ಎರಡು ವರ್ಷಗಳಲ್ಲಿ 100 ಕೋಟಿ ರೂಗಳನ್ನು ಮೀಸಲಿಡುವುದಾಗಿ ಘೋಷಿಸಲಾಗಿದೆ.

ಮಧುಸ್ವಾಮಿ ವರ್ತನೆ ಸರಿಯಲ್ಲ: ಸಿಎಂ ಬಿಎಸ್ವೈ

ಬೆಂಗಳೂರು: ಕಾನೂನು ಸಚಿವ ಜೆ.ಸಿ ಮಧುಸ್ವಾಮಿ ರೈತ ಮಹಿಳೆಗೆ ಅವಾಚ್ಯವಾಗಿ ಮಾತಾಡಿದ್ದು ಸರಿಯಲ್ಲ. ಯಾರೇ ಆಗಲಿ…