ಬೆಂಗಳೂರು: ಕರ್ನಾಟಕವನ್ನು ಇಟಲಿ ಅಥವಾ ನ್ಯೂಯಾರ್ಕ್ ಮಾಡಬೇಡಿ. ರಾಜ್ಯದಲ್ಲಿ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ ಚಿಕಿತ್ಸೆ, ಆಂಬುಲೆನ್ಸ್, ಗೌರವಯುತ ಅಂತ್ಯಸಂಸ್ಕಾರಗಳು ಮಾನವ ಹಕ್ಕುಗಳು. ಜನರ ಅಪೇಕ್ಷೆ, ನಿರೀಕ್ಷೆಗಳನ್ನು ಗಮನದಲ್ಲಿರಿಸಿ ದೃಢ ಹೆಜ್ಜೆಗಳನ್ನಿಡಿ ಎಂದು ಗದಗ ಶಾಸಕ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಕೊವಿಡ್-19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿರುವುದನ್ನು ಟೀಕಿಸಿರುವ ಅವರು, ಕೊವಿಡ್ ನಿಯಂತ್ರಣ ಮತ್ತು ಚಿಕಿತ್ಸೆಯ ನಿರ್ವಹಣೆ ಕುರಿತು ಹಲವು ಸಲಹೆ ನೀಡಿದ್ದಾರೆ.



ಹಾಸಿಗೆ ಕೊರತೆ, ಅಂಬುಲೆನ್ಸ್ ಅಸಮರ್ಪಕ ಸೇವೆ ಮತ್ತು ಊಟದ ಅವ್ಯವಸ್ಥೆಗಳನ್ನು ಕೂಡಲೇ ಸರಿಪಡಿಸಲು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಎಲ್ಲರಿಗೂ ಕೊವಿಡ್ ವಿಮೆ ಒದಗಿಸಬೇಕು, ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ಸಿಬ್ಬಂದಿ ಕೊರತೆ ತುಂಬಲು ಕೊವಿಡ್ ತುರ್ತು ನೇಮಕಾತಿ ಮಾಡಬೇಕು ಎಂದಿರುವ ಅವರು, ಮಾದರಿಗಳ ಪರೀಕ್ಷೆಯ ಫಲಿತಾಂಶಗಳು ವಿಳಂಬವಾಗದಂತೆ ನಿಗಾ ವಹಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿರುವ ಅವರು ಇದನ್ನು ಜನರ ಗಮನಕ್ಕೂ ತಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಳುಗದ ರವಿ‌ ಬೆಳಗು

ಪತ್ರಕರ್ತ, ಕವಿ, ಕತೆಗಾರ, ಅನುವಾದಕ, ವಿವಾದಾತ್ಮಕ ಬರಹಗಾರ ರವಿ ಬೆಳಗೆರೆ ನಿರೀಕ್ಷಿತವಾಗಿ ದೈಹಿಕವಾಗಿ ಹೋಗಿದ್ದಾರೆ. ಕುಡಿತ, ಸಿಗರೇಟ್, ರಸಿಕತೆ ರವಿಯನ್ನು ಬಲಿ ತೆಗೆದುಕೊಂಡಿದೆ. ಯಾವತ್ತಾದರೂ ಒಂದು ದಿನ ಸಾಯೋದೇ, ಹ್ಯಾಗ ಬದುಕಿದರೆ ಏನು? ಎಂಬ ಉಡಾಫೆಯೂ ಇತ್ತಲ್ಲ! ಆದರೆ ರವಿ very very colourful ಕನಸುಗಾರ. ಬದುಕಿನ ರಹಸ್ಯಗಳನ್ನು ಬಿಚ್ಚಿಟ್ಟ ಎದೆಗಾರ. ತುಂಬಾ ಕಾಡಿ ಕನಲಿದ ಹುಟ್ಟಿನ ರಹಸ್ಯ ಬಿಚ್ಚಿಟ್ಟು ನಿರಾಳವಾದ ಹೊತ್ತಲ್ಲಿ ಜೀವ ಬಿಟ್ಟ ಜಾದೂಗಾರ.

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 82 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ

ಶಾಸಕರೇ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯನ್ನೊಮ್ಮೆ ನೋಡಿ!

ರೋಗಿಗಳ ಪಾಲಿಗೆ ಆಸ್ಪತ್ರೆಗಳೇ ಸಂಜೀವಿನಿ ಅಂತಾರೆ. ಆದರಲ್ಲೂ ಸರ್ಕಾರಿ ಆಸ್ಪತ್ರೆಗಳಂತೂ ಬಡರೋಗಿಗಳಿಗೆ ಅನುಕೂಲವಾಗಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸರ್ಕಾರಿ ಆಸ್ಪತ್ರೆ ಗಬ್ಬು ನಾರುತ್ತಿದೆ.

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…