ಮಂಡ್ಯ: ಸಂಸದೆ ಸುಮಲತಾ ತಮಗೆ ಪಾಸಿಟಿವ್ ಬಂದಿದೆ ಎಂದು ಸೋಮವಾರ ಘೋಷಿಸಿದ್ದರು. ತಮ್ಮ ಸಂಪರ್ಕಿತರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ನೀಡಿದ್ದ ಅವರು, ಇನ್ನೂ ಯಾರಾದರೂ ಇದ್ದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದರು.

ಸುಮಲತಾ ಸಂಪರ್ಕಕ್ಕೆ ಬಂದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಸಂಖ್ಯೆ ದೊಡ್ಡದಿದ್ದರಿಂದ ಇಂದು ಮಂಗಳವಾರ ನಗರದ ಒಕ್ಕಲಿಗರ ಭವನದಲ್ಲಿ ಕೊರೋನಾ ಟೆಸ್ಟ್ ವ್ಯವಸ್ಥೆ ಮಾಡಲಾಗಿತ್ತು.

ಈ ವೇಳೆ ಪರೀಕ್ಷೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಅಧಿಕಾರಿಗಳು, ಸ್ಥಳಿಯ ರಾಜಕಾರಣಿಗಳು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಇವರೆಲ್ಲರ ಜೊತೆ ಸಂಪರ್ಕಕ್ಕೆ ಬಂದಿದ್ದ ದ್ವಿತೀಯ ಸಂಪರ್ಕಿತರು ದೊಡ್ಡ ಸಂಖ್ಯೆಯಲ್ಲಿ ಪರೀಕ್ಷೆಗೆ ಒಳಗಾದರು.

ಜೂನ್ 30ರಿಂದ ಜುಲೈ 5ರವರೆಗೆ ಸುಮಲತಾ ಮಂಡ್ಯದ ವಿವಿಧ ಭಾಗಗಳಲ್ಲಿ ಅಡ್ಡಾಡಿ ಕೊರೋನಾ ಜಾಗೃತಿ ಮೂಡಿಸಿದ್ದಲ್ಲದೇ, ಕಂಟೇನ್ಮೆಂಟ್ ಪ್ರದೇಶಕ್ಕೂ ಹೋಗಿ ಅಲ್ಲಿನ ಜನರಿಗೆ ನೆರವು ನೀಡಿದ್ದರು. ಈ 6 ದಿನಗಳಲ್ಲಿ ಅವರ ಸಂಪರ್ಕಕ್ಕೆ ಸಾಕಷ್ಟು ಜನ ಬಂದಿದ್ದರು.

ಸುಮಲತಾ ಜಿಲ್ಲಾಡಳಿತ ಕಚೇರಿಗೂ ಹೋಗಿದ್ದರಿಂದ ಅಲ್ಲಿನ ಸಿಬ್ಬಂದಿ ಕೂಡ ಪರೀಕ್ಷೆಗೆ ಹಾಜರಾಗಿದ್ದರು. ಇಂದು ಜಿಲ್ಲಾಡಳಿತ ಭವನವನ್ನು ಸ್ಯಾನಿಟೈಸ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…

ದಿಂಗಾಲೇಶ್ವರ ಶ್ರೀಗಳ ಹೇಳಿಕೆ: ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆ ಕಟ್ಟಲಾಗದು

ಉಪಕಾರ ಸ್ಮರಣಯೇ ಜನ್ಮದಿನವಾಗಿರುತ್ತದೆ. ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆಯನ್ನು ಕಟ್ಟುವುದು ಅಸಾಧ್ಯವಾದ ಮಾತಾಗಿದೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.