ಗದಗ: ಹೆಸರು ಹಾಗೂ ಗೋವಿನ ಜೋಳ ಬಿತ್ತನೆಯಾಗಿದ್ದು, ಈಗಾಗಲೇ ಹೆಸರು ಹೂವಾಡುವ ಹಂತ ಹಾಗೂ ಗೋವಿನ ಜೋಳ ಸುಮಾರು 30 ರಿಂದ 40 ದಿವಸದ ಬೆಳೆ ಇರುತ್ತವೆ. ಹೆಸರು ಬೆಳೆಯಲ್ಲಿ ವಿವಿದೆಡೆ ಹಳದಿ ರೋಗ ಮತ್ತು ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೇ ಹೆಚ್ಚಿದೆ. ಗದಗ ತಾಲೂಕಿನ ಉಪ ಕೃಷಿ ನಿರ್ದೇಶಕ ವೀರೇಶ ಹುನಗುಂದ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಅಡವಿ ಸೋಮಾಪೂರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿತು. ಹೆಸರು ಬೆಳೆಯಲ್ಲಿ ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.


ಮೆಕ್ಕೆ ಜೋಳ ಉತ್ತಮವಾಗಿ ಬೆಳೆಯಲು, ಲದ್ದಿ ಹುಳು ಹಾಗೂ ಇತರೇ ಕೀಟಗಳ ದಾಳಿಯಿಂದ ಬೆಳೆ ರಕ್ಷಿಸಿಕೊಳ್ಳಲು ಸೂಕ್ತ ನಿರ್ವಹಣಾ ಕ್ರಮಗಳ ಅಗತ್ಯವಿದೆ. ಕೀಟನಾಶಕಗಳಾದ ಕ್ಲೊರ‍್ಯಾಂಟ್ರಿನಿಲಿಪ್ರೋಲ್ 18.5 ಇ.ಸಿ.ಯನ್ನು 0.4 ಮಿ. ಲೀ. ಅಥವಾ ಲ್ಯಾಮ್ಡಾಸೈಹ್ಯಾಲೋಥ್ರೀನ್ 49 ಇ.ಸಿ.ಯನ್ನು 1 ಮಿ.ಲೀ. ಅಥವಾ ಎಮಾಮೆಕ್ಟಿನ್ ಬೆಂಜೋಯೇಟ್‌ಎಸ್.ಜಿ. ಯನ್ನು 0.5 ಮಿ.ಲೀ. ಅಥವಾ ಸ್ಪೆನೋಸ್ಯಾಡ್ 45 ಎಸ್.ಸಿ.ಯನ್ನು 0.2 ಮಿ.ಲೀ. ಅಥವಾ ಇಂಡಾಕ್ಸಿಕಾರ್ಬ್ 14.5 ಎಸ್.ಸಿ.ಯನ್ನು 0.5 ಮಿ.ಲೀ. ಅಥವಾ ಸ್ಪನೆಟ್ರಾಮ್ 11.7 ಎಸ್.ಸಿ.ಯನ್ನು 0.5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸುಳಿಯಲ್ಲಿ ಬೀಳುವಂತೆ ಸಿಂಪರಣೆ ಮಾಡಬೇಕು
ಹೆಸರು ಬೆಳೆಯಲ್ಲಿ ಕಂಡು ಬಂದ ಹಳದಿ ರೋಗ ಸಾಂಕ್ರಾಮಿಕವಾಗಿ ಹರಡುವ ಮುನ್ನವೇ ಅದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮಳೆ ಕೊರತೆ ಹಾಗೂ ಮೋಡ ಮುಸುಕಿದ ವಾತಾವಣಯಿಂದಾಗಿ ಹೆಸರು ಬೆಳೆಗೆ ಹಳದಿ ರೋಗ ಹರಡುವ ಸಾಧ್ಯತೆ ಇರುತ್ತದೆ. ಒಂದು ಬಾರಿ ಹಳದಿ ರೋಗ ಕಾಣಿಸಿಕೊಂಡರೇ ನಿಯಂತ್ರಣ ಬರುವುದು ಕಷ್ಠ ಸಾಧ್ಯ.
“ಪ್ರತಿ ಲೀಟರ್ ನೀರಿಗೆ 0.25 ಮಿ.ಲೀ. ಇಮಿಡಾಕ್ಲೋಪ್ರಿಡ್ ಸೇರಿಸಿ ಬೆಳೆಗೆ ಸಿಂಪಡಿಸಬೇಕು. ರೋಗಕ್ಕೆ ತುತ್ತಾದ ಸಸಿಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಿ ಕಿತ್ತು ಹೊಳಬೇಕು ಇಲ್ಲವೇ ಸುಡ ಬೇಕು. ಕ್ರಿಮಿನಾಶಕವನ್ನು ಬೆಳೆಗೆ ಸಿಂಪಡಿಸುವುದಕ್ಕಿಂತ ಮೊದಲು ಬದುವಿಗೆ ಸಿಂಪಡಿಸಿದರೇ ಅಲ್ಲಿ ವಾಸವಾಗಿರುವ ಜಿಗಿಹುಳು ನಿಯಂತ್ರಣಕ್ಕೆ ಬರುತ್ತವೆ. ಬಿತ್ತನೆ ಸಮಯದಲ್ಲಿ ಟ್ರೆಂಕೋಡರ್ಮಾ ಪುಡಿಯಿಂದ ಬೀಜೋಪಚಾರ ಮಾಡಿದರೆ ಹಾಗೂ ಬದುಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಹಳದಿ ರೋಗದ ಭೀತಿ ಇರುವುದಿಲ್ಲ ಎಂದು ತಂಡ ರೈತರಿಗೆ ಮಾಹಿತಿ ನೀಡಿತು.

1 comment
  1. Namma holadalli nelakadale beleyalli mutagi kempu chukki rogad bade idakke yava oushad simpadisabeku heli sar.

Leave a Reply

Your email address will not be published. Required fields are marked *

You May Also Like

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…

ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ?: ನಿಯಮಗಳೇನು ಗೊತ್ತಾ?

ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್…

ಪಾರದರ್ಶಕ ಕನ್ನಡ ಸಾಹಿತ್ಯ ಪರಿಷತ್ತು ನಿರ್ಮಾಣವೇ ನನ್ನ ಗುರಿ : ರಾಜಶೇಖರ ಮುಲಾಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬ್ರಷ್ಟಾಚಾರ ಬೇರೂರಿದ್ದು, ಸಂಪೂರ್ಣವಾಗಿ ತೊಡೆದು ಹಾಕು ಕೆಲಸವಾಗಬೇಕಿದೆ. ಆದ್ದರಿಂದ ಈ ಬಾರಿ ಕರ್ನಾಟಕ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಉತ್ತರ ಕರ್ನಾಟಕದಿಂದ ನಾನು ಕೂಡ ಸ್ಪರ್ಧಿಸಲಿದ್ದೇನೆ ಎಂದು ಅಣ್ಣಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ, ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.