ನವದೆಹಲಿ: ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಮೂರು ಟ್ರಸ್ಟ್ ವ್ಯವಹಾರಗಳ ಕುರಿತು ತನಿಖೆಗೆ ಕೇಂದ್ರ ಗೃಹ ಇಲಾಖೆ ಬುಧವಾರ ತನಿಖೆಗೆ ಆದೇಶಿಸಿದೆ.

ಗೃಹ ಇಲಾಖೆಯು ಒಂದು ಅಂತರ್-ಸಚಿವರ ಸಮಿತಿ ರಚಿಸಿದ್ದು, ಇದು ರಾಜೀವ್ ಗಾಂಧಿ ಫೌಂಡೇಷನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಮೆಮೊರಿಯಲ್ ಟ್ರಸ್ಟ್ ಈ ಮೂರು ಸಂಸ್ಥೆಗಳ ವ್ಯವಹಾರಗಳ ತನಿಖೆ ನಡೆಸಲಿದೆ. ಈ ಸಮಿತಿಗೆ ಜಾರಿ ನಿರ್ದೇಶನಾಲಯದ ಮುಖ್ಯಸ್ಥರು ಅಧ್ಯಕ್ಷರಾಗಿರುತ್ತಾರೆ.

ಆದಾಯ ತೆರಿಗೆ ಮತ್ತು ವಿದೇಶಿ ದೇಣಿಗೆ ನಿಯಮಗಳನ್ನು ಉಲ್ಲಂಘಿಸಿದ ಆರೋಪಗಳನ್ನು ಈ ಮೂರು ಸಂಸ್ಥೆಗಳು ಎದುರಿಸುತ್ತಿದ್ದು ತನಿಖೆಯ ಅಗತ್ಯವಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

1991ರಲ್ಲಿ ಸ್ಥಾಪನೆಯಾದ ರಾಜೀವ್ ಗಾಂಧಿ ಫೌಂಡೇಷನ್ ಮತ್ತು 2002ರಲ್ಲಿ ಸ್ಥಾಪನೆಯಾದ ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಇವೆರಡಕ್ಕೂ ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದಾರೆ.

ಮನಮೋಹನಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ, ಪ್ರಧಾನಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ರಾಜೀವ್ ಗಾಂಧಿ ಫೌಂಡೇಷನ್ಗೆ ಅನುದಾನ ನೀಡಲಾಗಿತ್ತು ಎಂದು ಕಳೆದ ತಿಂಗಳು ಬಿಜೆಪಿ ಆರೋಪಿಸಿತ್ತು.

ಮೊದಲಿನಿಂದಲೂ ಬಿಜೆಪಿ ಪಕ್ಷ ಈ ಮೂರೂ ಟ್ರಸ್ಟ್ ಮೇಲೆ ಆರೋಪಿಸುತ್ತ ಬಂದಿದ್ದರೂ ಈಗ ಏಕಾಏಕಿ ತನಿಖೆಗೆ ಆದೇಶ ಮಾಡಿರುವುದು, ಇದು ಜನರ ಗಮನ ಬೇರೆಡೆ ಸೆಳೆಯುವ ತಂತ್ರವೇ ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ ತನಿಖೆಗೆ ಉದ್ದೇಶಿಸಿದ ಸಂಗತಿಗಳು ಮನಮೋಹನಸಿಂಗ್ ಪ್ರಧಾನಿ ಆಗಿದ್ದ ಅವಧಿಯಲ್ಲಿ ಸಂಭವಿಸಿವೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಹಾಗೂ ಲಾಕ್‌ಡೌನ್‌ದಿಂದ ಭಾರತದ ಅರ್ಥಿಕತೆಯ ಮೇಲಾದ ಪರಿಣಾಮ

ಜಗತ್ತು ಇಂದು ಸ್ಥಬ್ದವಾಗಿದೆ. ಕೊರೋನಾ ಅಥವಾ ಕೊವಿಡ 19 (ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕೊರೋನಾ ವೈರಸ್ 2019) ಈ ಹಿಂದೆಂದು ಕೇಳರಿಯದ ಆರ್ಥಿಕ ಸಂಕಷ್ಟಕ್ಕೊಳಗಾಗಿಸಿದೆ. ಹಾಗೆ ನೋಡಿದರೆ ಜಗತ್ತಿಗೆ ಸಾಂಕ್ರಾಮಿಕ ರೋಗಗಳು ಹೊಸದವೇನಲ್ಲ.

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ಮಗಳ ಮದುವೆಗೆ ಕೂಡಿಟ್ಟ ಹಣ ಆಕ್ಸಿಜನ್ ಖರಿದಿಗೆ ದೇಣಿಗೆ ನೀಡಿದ ರೈತ

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಚೆಲ್ಲಿ ಕೂತಿರುವಾಗ, ಇಲ್ಲೊಬ್ಬ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ‌ ಖರೀದಿ ಮಾಡಲು ದೇಣಿಗೆ ನೀಡಿದ್ದಾನೆ.

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…