ಬೆಂಗಳೂರು: ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನಡೆಯುತ್ತಿರುವ ಆನ್ಲೈನ್ ತರಗತಿ ಮತ್ತು ಅವ್ಯವಹಾರ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಖರ್ಚು ವೆಚ್ಚಗಳ ಸೂಕ್ತ ಮಾಹಿತಿ ಸರ್ಕಾರದ ಬಳಿಯಿದ್ದರೆ ಅಧಿಕಾರಿಗಳ ಜೊತೆ ಅದನ್ನು ಕಳಿಸಿಕೊಡಲಿ, ನಾನೂ ಒಮ್ಮೆ ನೋಡುತ್ತೇನೆ. ತಾರ್ತಿಕ ಅಂತ್ಯ ಕಾಣುವವರೆಗೂ ಈ ವಿಚಾರದಿಂದ ಹಿಂದೆ ಸರಿಯುವುದಿಲ್ಲ. ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು. ಇದನ್ನು ಕೇಳುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಹಳ್ಳಿಗಳಿಂದ ಬಂದ ಜನರು ಬೆಂಗಳೂರಿನಲ್ಲಿ ಉಳಿದುಕೊಳ್ಳುವಂತಹ ವಾತಾವರಣವನ್ನು ಸರ್ಕಾರ ಕಲ್ಪಿಸಬೇಕಿತ್ತು, ಆಗ ಅವರು ಮರಳಿ ಹಳ್ಳಿಕಡೆ ಮುಖ ಮಾಡುವಂತಹಾ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ಅವರಿಗೆ ವಸತಿ, ಉದ್ಯೋಗ ನೀಡುವ ಜೊತೆಗೆ ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದೇ ಜನ ಹಳ್ಳಿಗಳಿಗೆ ಮರಳಲು ಕಾರಣ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲಾಕ್‌ಡೌನ್ ನಂತರವೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಹಾಗಾದರೆ ಲಾಕ್‌ಡೌನ್‌ನಿಂದಾದ ಪ್ರಯೋಜನವೇನು? ಈಗ ನಿಜವಾಗಿ ಲಾಕ್‌ಡೌನ್ ಅಗತ್ಯವಿದೆ. ಸರ್ಕಾರ ಕೇವಲ ಆರ್ಥಿಕತೆಗೆ ಮಹತ್ವ ನೀಡುತ್ತಿದೆ, ಜನರ ಜೀವಗಳಿಗೆ ಬೆಲೆ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಳೆಯಿಂದ ರಾಜ್ಯದಲ್ಲಿ ಏನಿರುತ್ತೆ?-ಏನಿರಲ್ಲ?: ಲಾಕ್ ಡೌನ್ ಸಡಿಲಿಕೆ ನಿಯಮಗಳೇನು?

ಈಗಾಗಲೇ ಕೇಂದ್ರ ಸರ್ಕಾರ ಲಾಕ್ ಡೌನ್ 4 ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೆ ಇಂದು ಸಂಪುಟ ಸಭೆ ಕರೆದ ಸಿಎಂ ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದಾಗಿ ನಾಳೆಯಿಂದ ರಾಜ್ಯದಲ್ಲಿ ಏನೆಲ್ಲ ಆರಂಭವಾಗಲಿವೆ..?

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಟ, ಮಂತ್ರದ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮದುವೆಯಾದ ಪಾಪಿ!

ಚಿತ್ರದುರ್ಗ : ಅಪ್ರಾಪ್ತ ಬಾಲಕಿಯನ್ನು ವಿವಸ್ತ್ರಗೊಳಿಸಿ, ಬೆದರಿಸಿ, ವಿವಾಹವಾದ ಕುರಿತು ಕೂಡ ಚೆಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…