ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಕರಿಯನ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28299) ಸೋಂಕು ದೃಢಪಟ್ಟಿದ್ದು ಸೋಂಕಿನ ಪತ್ತೆ ಕಾರ್ಯ ನಡೆದಿದೆ.

ಗದಗ-ಬೆಟಗೇರಿ ನಗರದ ಕುರಟ್ಟಿಪೇಟ ನಿವಾಸಿ 40 ವರ್ಷದ ಪುರುಷ (ಪಿ-28300) ಇವರಿಗೆ ಸೋಂಕು ದೃಡಪಟ್ಟಿರುತ್ತದೆ. ಕೆಮ್ಮು ಹಾಗೂ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಇವರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. (ಆಯ್.ಎಲ್.ಐ.)

ಹರ್ತಿ ಗ್ರಾಮದ ನಿವಾಸಿ 22 ವರ್ಷದ ಮಹಿಳೆ (ಪಿ-18287) ಸೋಂಕಿತರ ಸಂಪರ್ಕದಿಂದಾಗಿ ಗದಗ-ಬೆಟಗೇರಿ ನಗರದ ಜವಳಗಲ್ಲಿ ನಿವಾಸಿ 23 ವರ್ಷದ ಮಹಿಳೆ (ಪಿ-28301) ಹಾಗೂ ಎ.ಪಿ.ಎಂ.ಸಿ. ಹಿಂದುಗಡೆ ಹಮಾಲರ ಓಣಿ ನಿವಾಸಿ 35 ವರ್ಷದ ಮಹಿಳೆ (ಪಿ-28302) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ತೆಲಂಗಾಣ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಗೌರಿ ಓಣಿ ನಿವಾಸಿ 32 ವರ್ಷದ ಪುರುಷ (ಪಿ-28303) ಇವರಿಗೆ ಸೋಂಕು ದೃಢಪಟ್ಟಿರುತ್ತದೆ.

ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ ಸಾ ಪ ಜಿಲ್ಲಾಧ್ಯಕ್ಷರಾಗಿ ಶ್ರೀ ವಿವೇಕಾನಂದಗೌಡ ಆಯ್ಕೆ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲ ಆಯ್ಕೆಯಾಗಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.

ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!

ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…