ಗದಗ: ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿದೆ.
ಗದಗ ತಾಲೂಕಿನ ಸೀತಾಲಹರಿ ಗ್ರಾಮದ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜುಲೈ 8 ರಂದು ಕೆಮ್ಮು, ನೆಗಡಿ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತರಾಗಿ ಸ್ವ್ಯಾಬ್ ಟೆಸ್ಟ್ ಮಾಡಿಸಿಕೊಂಡಿದ್ದರು.
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಆಗಮಿಸಿ ತಮ್ಮ ಗಂಟಲು ದ್ರವದ ಮಾದರಿ ಪರೀಕ್ಷೆಗಾಗಿ ಒದಗಿಸಿದ್ದು,
ಬಳಿಕ ಮನೆಗೆ ತೆರಳಿದ್ದರು. ಇಂದು ಮುಂಜಾನೆ ಎದೆ ಉರಿತದಿಂದ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಅಂತ್ಯಕ್ರಿಯೆ ಕೋವಿಡ್-19 ಮಾರ್ಗಸೂಚಿಗಳನ್ವ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು
ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದಲಿತರು ಕುಡಿದ ಚಹಾ ಕಪ್ ತೊಳೆದ ತಹಶೀಲ್ದಾರ

ಯಾರಿಗೆ ಬಂತು? ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ‍್ಯ, ಸಿದ್ಧಲಿಂಗಯ್ಯನವರ ಈ ಕವಿತೆ ಕೇಳುತ್ತಲೇ ಅನೇಕರ ಯೋಚನೆ ಅಸ್ಪೃಶ್ಯತೆ ಕಡೆಗೆ ಹೊರಳುತ್ತವೆ. ಅಸ್ಪೃಶ್ಯತೆ ಇನ್ನು ಜೀವಂತವಿರುವ ಇಂತಹ ವರ್ತಮಾನದಲ್ಲಿ ತಹಶೀಲ್ದಾರರೊಬ್ಬರು ಅಸ್ಪೃಶ್ಯತೆ ಬಗ್ಗೆ ಜಾಗೃತಿ ಮೂಡಿಸಲು ದಲಿತರು ಕುಡಿದ ಚಹ ಕಪ್ ತೊಳೆದರೆ? ಎಸ್! ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ್ ಅವರು ಮಾಡಿದ್ದು ಅದನ್ನೇ.

ಶಿಘ್ರ ಆರಂಭವಾಗಲಿವೆ ದೇವಸ್ಥಾನಗಳು?

ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ.

ರೋಣ ಎಪಿಎಮ್‌ಸಿ ಅಧ್ಯಕ್ಷರಾಗಿ ರಾಜಣ್ಣ,ಉಪಾಧ್ಯಕ್ಷರಾಗಿ ಶಿವಾನಂದ ಆಯ್ಕೆ

ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಂಟೈನ್ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ

ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು…