ಶ್ರೀನಗರ: ಬುಧವಾರ ರಾತ್ರಿ 9ಕ್ಕೆ ಜಮ್ಮು-ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸೀಂ ಬಾರಿ, ಆತನ ತಂದೆ ಮತ್ತು ಸಹೋದರನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ.

ಹೊಸ ಕೇಂದ್ರಾಡಳಿತ ಪ್ರದೇಶದ ಬಂದಿಪೋರ್ ನಲ್ಲಿ ಘಟನೆ ನಡೆದಿದೆ. ರಾತ್ರಿ 9ರ ಸುಮಾರಿಗೆ ಸ್ಥಳೀಯ ಪೊಲೀಸ್ ಠಾಣೆಯ ಸಮೀಪದ ಅಂಗಡಿ ಎದುರು ಕುಳಿತಿದ್ದ ವಾಸೀಂ ಕುಟುಂಬದ ಸದಸ್ಯರ ಮೇಲೆ ಉಗ್ರರು ದಾಳಿ ನಡೆಸಿದರು.
ವಾಸೀಂ, ಅವರ ತಂದೆ ಬಶೀರ್ ಅಹ್ಮದ್, ಸಹೋದರ ಉಮರ್ ಬಶೀರ್ ತಲೆಗೆ ಗುಂಡಿಕ್ಕಿ ಪರಾರಿಯಾದರು. ತಕ್ಷಣ ಬಂದಿಪೋರ್ ಜಿಲ್ಲಾಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೇ ಮೂವರೂ ನಿಧನರಾಗಿದ್ದಾರೆ.

ಇದನ್ನು ಭದ್ರತಾ ವೈಫಲ್ಯ ಎನ್ನಲಾಗಿದೆ. ‘ವಾಸೀಂ ಅವರಿಗೆ ಸರಕಾರ ಭದ್ರತೆ ನೀಡಿದ್ದು, ದಾಳಿ ವೇಳೆ ಎಲ್ಲ ಎಂಟೂ ಗಾರ್ಡ್ ಗಳು ಸ್ಥಳದಲ್ಲಿ ಇರಲಿಲ್ಲ. ಅವರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಐಜಿಪಿ ವಿನಯಕುಮಾರ್ ಹೇಳಿದ್ದಾರೆ.

‘ರಾತ್ರಿಯೇ ಪ್ರಧಾನಿ ಫೋನ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ’ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಜೆ.ಪಿ.ನಡ್ಡಾ, ರಾಮ್ ಮಾಧವ್, ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿ ಕೃತ್ಯವನ್ನು ಖಂಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರಬುದ್ಧ ಜಾಣತನದ ನಿಲುವು ಪ್ರಕಟಿಸಲು ಪ್ರಧಾನಿಗೆ ಪತ್ರ

ಲಾಕ್ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖಂಡ ಟಿ.ಈಶ್ವರ ಬಹಿರಂಗ ಪತ್ರ ಬರೆದಿದ್ದಾರೆ.

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.

ಜೈಲುವಾಸದಿಂದ ಇಂದು ಶಶಿಕಲಾ ಬಿಡುಗಡೆ

ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.

ಗರಿಷ್ಠ ಮಟ್ಟದ ಇಂಧನ ತೆರಿಗೆ ಪಡೆಯುವ ರಾಷ್ಟ್ರ ಯಾವುದು ಗೊತ್ತಾ?

ಭಾರತ ಸದ್ಯ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಗರಿಷ್ಠ ಮಟ್ಟದ ತೆರಿಗೆ ವಿಧಿಸಿದ ರಾಷ್ಟ್ರವಾಗಿದೆ. ಭಾರತ ಮೊದಲನೇ ಸ್ಥಾನದಲ್ಲಿದ್ದರೇ ಇಟಲಿ ಎರಡನೇ ಸ್ಥಾನದಲ್ಲಿದೆ.