ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಜುಲೈ 20ರ ಸುಮಾರಿಗೆ ಪ್ರಕಟವಾಗಲಿದೆ ಎಂದಿದ್ದಾರೆ.

‘ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ, ಇಂದು ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾಗುತ್ತದೆಯೇ ಎಂದು ಕೇಳುತ್ತಿದ್ದಾರೆ.

ಇಲ್ಲ, ಇಂದು ಪ್ರಕಟವಾಗುವುದಿಲ್ಲ. ಮೊದಲೇ ತಿಳಿಸಿದಂತೆ ಜುಲೈ 20ರ ಸುಮಾರಿಗೆ ಪ್ರಕಟವಾಗುತ್ತದೆ’ ಎಂದು ಸಚಿವರು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಇಂದು ಗುರುವಾರ ಪಿಯುಸಿ ಫಲಿತಾಂಶ ಪ್ರಕಟ ಎಂದು ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಯೊಂದು ಬುಧವಾರ ಹರಿದಾಡಿತ್ತು. ಸಂಶಯಗೊಂಡ ನೂರಾರು ವಿದ್ಯಾರ್ಥಿಗಳು ಸಚಿವ ಸುರೇಶಕುಮಾರ್ ಅವರಿಗೆ ಫೋನ್ ಮಾಡಿ, ಮೆಸೆಜ್ ಮಾಡಿ ಈ ಸುದ್ದಿ ನಿಜವಾ ಎಂದು ಕೇಳಿದ್ದರು.

1 comment
Leave a Reply

Your email address will not be published. Required fields are marked *

You May Also Like

ಕೃಷ್ಣಾ ನದಿತೀರದ ಪ್ರವಾಹಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ ಆಲಟ್೯ರಾಗಿರಲು ಸೂಚನೆ

ಉತ್ತರಪ್ರಭಆಲಮಟ್ಟ: ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ…

ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಲಕ್ಷ್ಮೇಶ್ವರ: ಹೆಚ್ಚಿನ ಬಸ್ ವ್ಯವಸ್ಥೆಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಪಟ್ಟಣದಿಂದ ಗದಗ ನಗರಕ್ಕೆ ಹೆಚ್ಚಿನ ಬಸ್‍ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿದರು.

ಪುರಾಣ ಪ್ರವಚನ ಪ್ರಾರಂಭೋತ್ಸವ ಆಧ್ಯಾತ್ಮಿಕ ಜೀವನ ಚೈತ್ರವೇ ನವೋಲ್ಲಾಸಕ್ಕೆ ದಾರಿ- ರುದ್ರಮುನಿ ಶಿವಾಚಾರ್ಯ

ಉತ್ತರಪ್ರಭ ಸುದ್ದಿಆಲಮಟ್ಟಿ: ಧಾಮೀ೯ಕ ಪ್ರವಚನಗಳು ಆಲಿಸುವುದರಿಂದ ಮನಸ್ಸಿನಲ್ಲಿ ಶಾಂತಿ, ನೆಮ್ಮದಿ ನೆಲೆಗೊಳ್ಳುತ್ತದೆ. ಒಳ್ಳೆಯ ವಿಚಾರಗಳು ಶ್ರವಣಗಳಿಗೆ…