ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಜುಲೈ 20ರ ಸುಮಾರಿಗೆ ಪ್ರಕಟವಾಗಲಿದೆ ಎಂದಿದ್ದಾರೆ.

‘ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ, ಇಂದು ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾಗುತ್ತದೆಯೇ ಎಂದು ಕೇಳುತ್ತಿದ್ದಾರೆ.

ಇಲ್ಲ, ಇಂದು ಪ್ರಕಟವಾಗುವುದಿಲ್ಲ. ಮೊದಲೇ ತಿಳಿಸಿದಂತೆ ಜುಲೈ 20ರ ಸುಮಾರಿಗೆ ಪ್ರಕಟವಾಗುತ್ತದೆ’ ಎಂದು ಸಚಿವರು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

ಇಂದು ಗುರುವಾರ ಪಿಯುಸಿ ಫಲಿತಾಂಶ ಪ್ರಕಟ ಎಂದು ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಯೊಂದು ಬುಧವಾರ ಹರಿದಾಡಿತ್ತು. ಸಂಶಯಗೊಂಡ ನೂರಾರು ವಿದ್ಯಾರ್ಥಿಗಳು ಸಚಿವ ಸುರೇಶಕುಮಾರ್ ಅವರಿಗೆ ಫೋನ್ ಮಾಡಿ, ಮೆಸೆಜ್ ಮಾಡಿ ಈ ಸುದ್ದಿ ನಿಜವಾ ಎಂದು ಕೇಳಿದ್ದರು.

1 comment
Leave a Reply

Your email address will not be published. Required fields are marked *

You May Also Like

ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ

: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.

ಮೊರಾರ್ಜಿ ವಸತಿ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೋವಿಡ್ ಧೃಡ

ಮುಳಗುಂದ : ಇಲ್ಲಿನ ಯಳವತ್ತಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ವಿದ್ಯಾರ್ಥಿಗಳು…

ಶಾಲೆ ಪ್ರಾರಂಭದ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ಸಿಎಂ

ಈಗಾಗಲೇ ಶಾಲೆಗಳ ಆರಂಭದ ಕುರಿತು ಪರ-ವಿರೋಧ ಚರ್ಚೆಗಳು ನಡೆದಿವೆ. ಇನ್ನು ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಕೋವಿಡ್19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ.

ಹೂವಿನಹಡಗಲಿ ಉಪ ಕಾರಾಗೃಹದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ: ರಾಷ್ಟ್ರೀಯ ಐಕ್ಯತೆಗೆ ಭಾಷಾ ಸೌಹಾರ್ದತೆ ಸಹಕಾರಿ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ದೇಶದ ಐಕ್ಯತೆಗೆ ಭಾಷಾ ಸೌಹಾರ್ಧತೆಯೇ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಎಂ.ಗುರುಬಸವರಾಜಯ್ಯ ಹೇಳಿದರು.