ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಜುಲೈ 20ರ ಸುಮಾರಿಗೆ ಪ್ರಕಟವಾಗಲಿದೆ ಎಂದಿದ್ದಾರೆ.
‘ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ, ಇಂದು ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾಗುತ್ತದೆಯೇ ಎಂದು ಕೇಳುತ್ತಿದ್ದಾರೆ.
ಇಲ್ಲ, ಇಂದು ಪ್ರಕಟವಾಗುವುದಿಲ್ಲ. ಮೊದಲೇ ತಿಳಿಸಿದಂತೆ ಜುಲೈ 20ರ ಸುಮಾರಿಗೆ ಪ್ರಕಟವಾಗುತ್ತದೆ’ ಎಂದು ಸಚಿವರು ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.
ಇಂದು ಗುರುವಾರ ಪಿಯುಸಿ ಫಲಿತಾಂಶ ಪ್ರಕಟ ಎಂದು ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಯೊಂದು ಬುಧವಾರ ಹರಿದಾಡಿತ್ತು. ಸಂಶಯಗೊಂಡ ನೂರಾರು ವಿದ್ಯಾರ್ಥಿಗಳು ಸಚಿವ ಸುರೇಶಕುಮಾರ್ ಅವರಿಗೆ ಫೋನ್ ಮಾಡಿ, ಮೆಸೆಜ್ ಮಾಡಿ ಈ ಸುದ್ದಿ ನಿಜವಾ ಎಂದು ಕೇಳಿದ್ದರು.
1 comment