ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು ರದ್ದುಪಡಿಸಿದೆ.

ಈ ಕುರಿತಂತೆ ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದು, ಸಾಮಾನ್ಯ ಪದವಿಗಳ ಮೊದಲ ಹಾಗೂ 2ನೇ ವರ್ಷ, ಇಂಜನೀಯರಿಂಗ್ ಪದವಿಯ 1, 2, ಹಾಗೂ 3ನೇ ವರ್ಷದ ಪರೀಕ್ಷೆಗಳು ರದ್ದಾಗಿವೆ. ಇದಲ್ಲದೇ ಡಿಪ್ಲೋಮಾ ತರಗತಿಯ ಮೊದಲ ಹಾಗೂ 2ನೇ ವರ್ಷದ ಪರೀಕ್ಷೆ ಸಹ ರದ್ದಾಗಿದೆ. ಸ್ನಾತಕೋತ್ತರದಲ್ಲೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಪದವಿ, ಡಿಪ್ಲೋಮಾ ಮತ್ತು ಪಿಜಿಯ ಅಂತಿಮ ವರ್ಷದಲ್ಲಿ ಇರದೇ ಇರುವವರಿಗೆ (ಮೊದಲ, ಎರಡನೆ ಅಥವಾ 3ನೆ ವರ್ಷ) ಅವರ ಆಂತರಿಕ ಮೌಲ್ಯಮಾಪನ (ಇಂಟರ್ನಲ್ ಅಸೆಸ್ ಮೆಂಟ್) ಮತ್ತು ಹಿಂದಿನ ಪರೀಕ್ಷೆಯ ಅಂಕಗಳ (ತಲಾ ಶೇ. 50) ಆಧಾರದಲ್ಲಿ ಗ್ರೇಡ್ ನೀಡಿ ಮುಂದಿನ ತರಗತಿಗೆ ಪ್ರಮೋಷನ್ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ನಲ್ಲಿ ಆನ್ ಲೈನ್ ಅಥವಾ ಆಫ್ ಲೈನ್ ಅಥವಾ ಎರಡೂ ಬೆರೆತ ಹೈಬ್ರಿಡ್ ಪರೀಕ್ಷೆ ನಡೆಸಲಾಗುವುದು. ಹಿಂದಿನ ವರ್ಷದ ವಿಷಯ ಬಾಕಿ ಇದ್ದರೆ ಸೆಪ್ಟೆಂಬರ್ ನಲ್ಲೇ ಬರೆಯಲು ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶ ಪ್ರತಿ
1 comment
  1. Is it applicable for B.Ed. 1&3 Sem examination?
    Plz make it clear and leave the concerned circular.

Leave a Reply

Your email address will not be published. Required fields are marked *

You May Also Like

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಗದಗನಲ್ಲಿ ಜನ ಜಾಗೃತಿ ರಥಕ್ಕೆ ಚಾಲನೆ

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜನಜಾಗೃತಿ ರಥಕ್ಕೆ ಜಿಲ್ಲಾಡಳಿತ ಭವನದಲ್ಲಿಂದು ಚಾಲನೆ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಂದು ಭೇಟಿ ನೀಡಿ ಗದಗ ನಗರದಲ್ಲಿ ವಲಸೆ ಕಾರ್ಮಿಕರಿಗೆ ಒದಗಿಸಲಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಬೈಕ ಕಳ್ಳನನ್ನು ಬಂದನ ಮಾಡಿದ ಪೊಲೀಸರು

ಲಕ್ಷ್ಮೇಶ್ವರ.ಬೈಕ್ ಕಳ್ಳನನ್ನು ಪತ್ತೆ ಹಚ್ಚುವಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಠಾಣೆ ಪೊಲೀಸರು ಯಶಸ್ಸಿಯಾಗಿದ್ದಾರೆ.ನಾಲ್ಕು ಬೈಕಗಳನ್ನು ಕಳ್ಳತನ…