ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು ರದ್ದುಪಡಿಸಿದೆ.

ಈ ಕುರಿತಂತೆ ಡಿಸಿಎಂ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದು, ಸಾಮಾನ್ಯ ಪದವಿಗಳ ಮೊದಲ ಹಾಗೂ 2ನೇ ವರ್ಷ, ಇಂಜನೀಯರಿಂಗ್ ಪದವಿಯ 1, 2, ಹಾಗೂ 3ನೇ ವರ್ಷದ ಪರೀಕ್ಷೆಗಳು ರದ್ದಾಗಿವೆ. ಇದಲ್ಲದೇ ಡಿಪ್ಲೋಮಾ ತರಗತಿಯ ಮೊದಲ ಹಾಗೂ 2ನೇ ವರ್ಷದ ಪರೀಕ್ಷೆ ಸಹ ರದ್ದಾಗಿದೆ. ಸ್ನಾತಕೋತ್ತರದಲ್ಲೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಪದವಿ, ಡಿಪ್ಲೋಮಾ ಮತ್ತು ಪಿಜಿಯ ಅಂತಿಮ ವರ್ಷದಲ್ಲಿ ಇರದೇ ಇರುವವರಿಗೆ (ಮೊದಲ, ಎರಡನೆ ಅಥವಾ 3ನೆ ವರ್ಷ) ಅವರ ಆಂತರಿಕ ಮೌಲ್ಯಮಾಪನ (ಇಂಟರ್ನಲ್ ಅಸೆಸ್ ಮೆಂಟ್) ಮತ್ತು ಹಿಂದಿನ ಪರೀಕ್ಷೆಯ ಅಂಕಗಳ (ತಲಾ ಶೇ. 50) ಆಧಾರದಲ್ಲಿ ಗ್ರೇಡ್ ನೀಡಿ ಮುಂದಿನ ತರಗತಿಗೆ ಪ್ರಮೋಷನ್ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ನಲ್ಲಿ ಆನ್ ಲೈನ್ ಅಥವಾ ಆಫ್ ಲೈನ್ ಅಥವಾ ಎರಡೂ ಬೆರೆತ ಹೈಬ್ರಿಡ್ ಪರೀಕ್ಷೆ ನಡೆಸಲಾಗುವುದು. ಹಿಂದಿನ ವರ್ಷದ ವಿಷಯ ಬಾಕಿ ಇದ್ದರೆ ಸೆಪ್ಟೆಂಬರ್ ನಲ್ಲೇ ಬರೆಯಲು ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶ ಪ್ರತಿ
1 comment
  1. Is it applicable for B.Ed. 1&3 Sem examination?
    Plz make it clear and leave the concerned circular.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಕೊರೊನಾ ವಾರಿಯರ್ಸ್ ಗೆ ಶಿಕ್ಷಕನ ಸೇವೆ

ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.

ಲಾಕ್ ಡೌನ್ ವಿಸ್ತರಣೆಯ ನಿರ್ಧಾರದ ಕುರಿತು ಸಿಎಂ ಹೇಳಿದ್ದೇನು?

ಬೆಂಗಳೂರು: ಜೂನ್ 7ರ ವರೆಗೆ ಎಂದಿನಂತೆ ಲಾಕ್ಡೌನ್ ಇರುತ್ತದೆ. ಜೂನ್ 7ರ ನಂತರ ಲಾಕ್ಡೌನ್ ಪ್ರಶ್ನೆ ಉದ್ಭವಿಸಲ್ಲ ಎಂದೆನಿಸುತ್ತದೆ. ಆದರೆ ರಾಜ್ಯದ ಸ್ಥಿತಿಗತಿ ನೋಡಿಕೊಂಡು ಜೂನ್ 5 ರಂದು ಲಾಕ್ ಡೌನ್ ವಿಸ್ತರಣೆಯ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಅನಾರೋಗ್ಯದಿಂದ ಮೃತಪಟ್ಟ ಪೊಲೀಸ್ ಪೇದೆಗೂ ಕೊರೊನಾ!

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮೃತ ಪಟ್ಟಿದ್ದು, ಅವರಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.